ಶುಭ ಸುದ್ದಿ: 8000 ಪೊಲೀಸ್ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್ ಮಾಹಿತಿ

ಕೊಪ್ಪಳ: ಪಿಎಸ್ಐ ನೇಮಕಾತಿ ಹಗರಣದ ನಂತರ ಪೊಲೀಸ್ ಇಲಾಖೆಯಲ್ಲಿ 5 ವರ್ಷಗಳಿಂದ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ನಡೆಸಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕಳೆದ ಸರ್ಕಾರದ ಅವಧಿಯಲ್ಲಿ ಪಿಎಸ್ಐ ಹಗರಣ ನಡೆದಿದ್ದು, 5 ವರ್ಷ ಯಾವುದೇ ನೇಮಕಾತಿ ನಡೆದಿಲ್ಲ. ಒಂದು ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. 500 ಪಿಎಸ್ಐಗಳ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ತರಬೇತಿಯಲ್ಲಿದ್ದಾರೆ. ಅವರು ಶೀಘ್ರವೇ ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 8000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳು ಖಾಲಿಯಿದ್ದು, ಆಯಾ ಜಿಲ್ಲೆಯಲ್ಲಿ ಎಷ್ಟು ಪೊಲೀಸ್ ಸಿಬ್ಬಂದಿ ಕೊರತೆ ಇದೆ ಎನ್ನುವುದರ ವರದಿ ಪಡೆಯಲಾಗಿದೆ. ಆದ್ಯತೆಯ ಮೇರೆಗೆ ಹಂತ ಹಂತವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read