ಹಿರಿಯ ಕಲಾವಿದರಿಗೆ ಗುಡ್ ನ್ಯೂಸ್: ಮಾಶಾಸನ ಮೊತ್ತ 3 ಸಾವಿರ ರೂ.ಗೆ ಹೆಚ್ಚಳ

ಬೆಂಗಳೂರು: ಹಿರಿಯ ಕಲಾವಿದರಿಗೆ ಮಾಸಾಶನ ಮೊತ್ತ ಹೆಚ್ಚಳ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಇನ್ನು ಪ್ರಶಸ್ತಿಗಳನ್ನು ಆಯಾ ವರ್ಷದಲ್ಲಿಯೇ ನೀಡಲಾಗುವುದು. ಎರಡು ಮೂರು ವರ್ಷ ವಿಳಂಬ ಮಾಡುವುದಿಲ್ಲ. ಮುಂದಿನ ವರ್ಷದಿಂದ ಅಕಾಡೆಮಿಗಳಿಗೆ ನೀಡಲಾಗುವ ಅನುದಾನ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಸ್ತುತ 12,527 ಹಿರಿಯ ಕಲಾವಿದರಿಗೆ ಪ್ರತಿ ತಿಂಗಳು 2000 ರೂ. ಮಾಸಾಶನ ನೀಡುತ್ತಿದ್ದು, ಈ ಮೊತ್ತವನ್ನು ಮುಂದಿನ ವರ್ಷದಿಂದ ತಲಾ ಮೂರು ಸಾವಿರ ರೂಪಾಯಿಗೆ ಹೆಚ್ಚಳ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read