ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ. 2024ರ ಡಿಸೆಂಬರ್ ನಲ್ಲಿ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.