ಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಮುದ್ರವನ್ನು ನಂಬಿಕೊಂಡು ಮೀನುಗಾರರು ಜೀವನ ನಡೆಸುತ್ತಾರೆ. ರೈತರು ಕೃಷಿ ಭೂಮಿಯಲ್ಲಿ ಕೃಷಿ ಮಾಡುವಂತೆಯೇ ಮೀನುಗಾರರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಸಮುದ್ರದಲ್ಲಿ ಕೃಷಿ ಮಾಡುತ್ತಾರೆ. ಡೀಸೆಲ್ ಬೆಲೆ ಇಳಿಕೆ, ಸಬ್ಸಿಡಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಮೀನುಗಾರರು ಬೇಡಿಕೆ ಇಟ್ಟಿದ್ದು, ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read