7ನೇ ವೇತನ ಆಯೋಗ ವರದಿ ಶೀಘ್ರ ಜಾರಿಗೆ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣಿಗೆ ನೇಮಕವಾದ 7ನೇ ವೇತನ ಆಯೋಗದಿಂದ ಶಿಫಾರಸುಗಳನ್ನು ಪಡೆದು ಕೂಡಲೇ ವರದಿ ಜಾರಿಗೆ ತರಬೇಕು ಎಂದು ನೌಕರರ ಸಂಘದ ಮಾಜಿ ಅಧ್ಯಕ್ಷರಾಗಿರುವ ಜೆಡಿಎಸ್ ಶಾಸಕ ಎಂ.ಟಿ. ಕೃಷ್ಣಪ್ಪ ಒತ್ತಾಯಿಸಿದ್ದಾರೆ.

ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರ ರೂಪಿಸಿದ ಯೋಜನೆಗಳನ್ನು ಜಾರಿಗೆ ತರುವುದೇ ನೌಕರರು. ಸರ್ಕಾರಿ ನೌಕರರಿಗೆ ಅನುಕೂಲ ಮಾಡಿಕೊಟ್ಟರೆ ಸರ್ಕಾರಕ್ಕೂ ಪ್ರಯೋಜನವಾಗುತ್ತದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ನೌಕರರ ವೇತನಕ್ಕೆ ಹೋಲಿಸಿದರೆ ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ತಾರತಮ್ಯ ಇದೆ. ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿಗಳು ಉತ್ತರ ನೀಡುವ ಸಂದರ್ಭದಲ್ಲಿ 7ನೇ ವೇತನ ಆಯೋಗ ವರದಿ ಜಾರಿ ಬಗ್ಗೆ ಸ್ಪಷ್ಟ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read