‘INDIA’ ಮೈತ್ರಿಕೂಟದ ಒಲೈಕೆಗಾಗಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ : ಸಂಸದ ತೇಜಸ್ವಿ ಸೂರ್ಯ ಕಿಡಿ

ಬೆಂಗಳೂರು : INDIA ಮೈತ್ರಿಕೂಟದ ಒಲೈಕೆಗಾಗಿ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನಿಯಂತ್ರಣಾ ಸಮಿತಿಯ ಮುಂದೆ ಸರಿಯಾಗಿ ವಾದ ಮಂಡನೆಯಲ್ಲಿ ವಿಫಲವಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರವು I.N.D.I. ಮೈತ್ರಿಕೂಟದ ಒಲೈಕೆಗಾಗಿ ತಮಿಳುನಾಡಿಗೆ ನೀರು ಹರಿಸುತ್ತಿದೆ. ಕಾಂಗ್ರೆಸ್ ಸರ್ಕಾರ ರಾಜಕೀಯವನ್ನು ಬೆರೆಸಿ ತಮ್ಮ ವಿಫಲತೆಗಳನ್ನು ಮುಚ್ಚಿಟ್ಟು ಇನ್ನೊಬ್ಬರ ಮೇಲೆ ಗೂಬೆ ಕೂರಿಸಲು ಹೊರಟಿದೆ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದ್ದಾರೆ.

https://twitter.com/BJP4Karnataka/status/1707675716232380820

ಸ್ಟಾಲಿನ್ ಸರ್ಕಾರಕ್ಕೆ ಕಳ್ಳತನದಿಂದ ಆದೇಶಕ್ಕಿಂತಲೂ ಹೆಚ್ಚು ನೀರು ಬಿಟ್ಟು ಕನ್ನಡಿಗರಿಗೆ, ಕರ್ನಾಟಕಕ್ಕೆ ದ್ರೋಹ ಎಸಗಿ, ಏಳು ಸುತ್ತಿನ ಕೋಟೆಯ ಪೊಲೀಸ್ ಭದ್ರತೆಯಲ್ಲಿ ಭಯದಿಂದ ಬಚ್ಚಿಟ್ಟುಕೊಂಡಿರುವ ನಮ್ಮ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಿಜೆಪಿ ಟ್ವೀಟ್ ನಲ್ಲಿ ಲೇವಡಿ ಮಾಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read