ದೆಹಲಿಯ ಮೊಘಲ್ ಗಾರ್ಡನ್ಸ್ ಗೆ ‘ಅಮೃತ್ ಉದ್ಯಾನ್’ ಎಂದು ಮರುನಾಮಕರಣ ಮಾಡಿದ ಸರ್ಕಾರ

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿರುವ ಮೊಘಲ್ ಗಾರ್ಡನ್ಸ್ ಅನ್ನು ಕೇಂದ್ರ ಸರ್ಕಾರ ಶನಿವಾರ “ಅಮೃತ್ ಉದ್ಯಾನ್” ಎಂದು ಮರುನಾಮಕರಣ ಮಾಡಿದೆ.

ಭಾರತದ ಸ್ವಾತಂತ್ರ್ಯದ 75 ವರ್ಷಗಳನ್ನು ಗುರುತಿಸುವ ‘ಅಮೃತ ಮಹೋತ್ಸವ’ದ ಥೀಮ್‌ ಗೆ ಅನುಗುಣವಾಗಿ ಕೇಂದ್ರ ಸರ್ಕಾರ ಮೊಘಲ್ ಗಾರ್ಡನ್ಸ್ ಹೆಸರನ್ನು ಅಮೃತ್ ಉದ್ಯಾನ್ ಎಂದು ಬದಲಾಯಿಸಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಉಪ ಪತ್ರಿಕಾ ಕಾರ್ಯದರ್ಶಿ ನಾವಿಕಾ ಗುಪ್ತಾ ಮಾತನಾಡಿ, ಸ್ವಾತಂತ್ರ್ಯದ 75 ವರ್ಷಗಳನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ವಾಗಿ ಆಚರಿಸುವ ಸಂದರ್ಭದಲ್ಲಿ, ರಾಷ್ಟ್ರಪತಿ ಭವನದ ಉದ್ಯಾನಕ್ಕೆ ಅಮೃತ್ ಉದ್ಯಾನ ಎಂದು ಹೆಸರಿಡಲಾಗಿದ್ದು, ಅಮೃತ್ ಉದ್ಯಾನವನ್ನು ದ್ರೌಪದಿ ಮುರ್ಮು ಅವರು ಜನವರಿ 29 ರ ಭಾನುವಾರದಂದು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ್ದಾರೆ..

ಜನವರಿ 31 ರಿಂದ ಮಾರ್ಚ್ 26 ರವರೆಗೆ ಎರಡು ತಿಂಗಳ ಕಾಲ ಸಾರ್ವಜನಿಕರಿಗೆ ತೆರೆದಿರುತ್ತದೆ.  ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗುವಂತೆ ಎರಡು ತಿಂಗಳ ಅವಧಿಯನ್ನು ಹೊರತುಪಡಿಸಿ, ರೈತರು ಮತ್ತು ವಿಕಲಚೇತನರಂತಹ ವಿಶೇಷ ಗುಂಪುಗಳ ವೀಕ್ಷಣೆಗೆ ಉದ್ಯಾನವನ್ನು ಮುಕ್ತವಾಗಿಡಲು ಸರ್ಕಾರ ಯೋಜಿಸಿದೆ ಎಂದು ನಾವಿಕಾ ಗುಪ್ತಾ ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read