ಮಕ್ಕಳಿಗೆ ರಜೆ ಎಂದು ಊರಿಗೆ ಹೊರಟ ನೌಕರರು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಅನುಮತಿ ಪಡೆಯದೇ ಕೇಂದ್ರ ಸ್ಥಾನ ಬಿಡುವಂತಿಲ್ಲ

ಶಿವಮೊಗ್ಗ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಸಂಬಂಧ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣೆಯ ನೀತಿ ಸಂಹಿತೆ ಅನುಷ್ಠಾನಗೊಳಿಸಲು ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ವರ್ಗದವರ ಹೆಚ್ಚಿನ ಅವಶ್ಯಕತೆ ಇರುವುದರಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಸಿಬ್ಬಂದಿ ಮತ್ತು ಶಿಕ್ಷಕ ವರ್ಗದವರು ಇಲಾಖಾ ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ಹೇಳಲಾಗಿದೆ.

ಇಲಾಖೆ ಮುಖ್ಯಸ್ಥರ ಪೂರ್ವಾನುಮತಿ ಪಡೆದುಕೊಳ್ಳದೇ ತಮ್ಮ ಕೇಂದ್ರ ಸ್ಥಾನ ಬಿಡದೇ ಇರುವಂತೆ ಕ್ರಮ ಕೈಗೊಳ್ಳಲು ಜಿಲ್ಲೆಯ ಎಲ್ಲಾ ಇಲಾಖೆ ಮುಖ್ಯಸ್ಥರುಗಳಿಗೆ ಸೂಚನೆ ನೀಡಲಾಗಿದೆ. ಇಲಾಖಾ ಮುಖ್ಯಸ್ಥರು ತಮ್ಮ ಇಲಾಖೆಯ ಅಧೀನ ಅಧಿಕಾರಿಗಳಿಗೆ ಈ ಕುರಿತು ಕಟ್ಟು ನಿಟ್ಟಾಗಿ ಕ್ರಮ ವಹಿಸುವಂತೆ ನಿರ್ದೇಶಿಸಲು ತಿಳಿಸಲಾಗಿದೆ.

ಜಿಲ್ಲೆಯ ಎಲ್ಲಾ ಇಲಾಖೆಯ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೆ ತಮ್ಮ ಕೇಂದ್ರ ಸ್ಥಾನವನ್ನು ಬಿಡುವಂತಿಲ್ಲ ಎಂದು ನಿರ್ದೇಶನ ನೀಡಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read