ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್: ಎಲ್ಲಾ ಜಿಲ್ಲೆಗಳಲ್ಲಿ ನೋಂದಣಿಗೆ ಸಮರ್ಪಕ ವ್ಯವಸ್ಥೆಗೆ ಸೂಚನೆ

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಅಗತ್ಯ ಸಿದ್ಧತೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಜಿಲ್ಲಾಧಿಕಾರಿಗಳೊಂದಿಗೆ ಸಂವಾದ ನಡೆಸಿದ್ದಾರೆ.

ವಿಕಾಸಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಂವಾದ ನಡೆಸಿದ ಸಚಿವರು, ಫಲಾನುಭವಿಗಳ ಸಮರ್ಪಕ ನೋಂದಣಿಗೆ ಸೂಕ್ತ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಫಲಾನುಭವಿಗಳ ಸಮರ್ಪಕ ನೋಂದಣಿಗೆ ಸೂಕ್ತ ಸಿದ್ಧತೆ ಕೈಗೊಳ್ಳಬೇಕು. ನೋಂದಣಿ ಸ್ಥಳದಲ್ಲಿ ಅಗತ್ಯ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲಗಳಿಗೆ ಅನುವು ಮಾಡಿಕೊಡಬಾರದು. ಅಗತ್ಯ ಕಂಪ್ಯೂಟರ್, ಇಂಟರ್ನೆಟ್ ಸಂಪರ್ಕ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳನ್ನು ನಿಯೋಜಿಸಬೇಕು ಎಂದು ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read