ವಡೋದರ: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿ ಮುಳುಗಿ ಆರು ಮಕ್ಕಳು ಸಾವನ್ನಪ್ಪಿದ್ದಾರೆ.
ದೋಣಿ ಮಗುಚಿ ಬಿದ್ದ ಪರಿಣಾಮ ಮಕ್ಕಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಸಿಎಂ ಭೂಪೇಂದ್ರ ಪಟೇಲ್ ಸಂತಾಪ ಸೂಚಿಸಿದ್ದಾರೆ. ಪ್ರಾಣ ಕಳೆದುಕೊಂಡ ಅಮಾಯಕ ಮಕ್ಕಳ ಆತ್ಮಕ್ಕೆ ಶಾಂತಿ ಸಿಗಲಿ. ದುಃಖದ ಸಮಯದಲ್ಲಿ ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ಕರುಣಾಮಯಿ ದೇವರು ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
ದೋಣಿಯಲ್ಲಿದ್ದ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ರಕ್ಷಣಾ ಕಾರ್ಯಾಚರಣೆ ಸದ್ಯ ನಡೆಯುತ್ತಿದೆ. ಅಪಘಾತದ ಸಂತ್ರಸ್ತರಿಗೆ ತಕ್ಷಣ ಪರಿಹಾರ ಮತ್ತು ಚಿಕಿತ್ಸೆ ನೀಡಲು ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
વડોદરાના હરણી તળાવમાં બોટ પલટી જતાં બાળકોના ડૂબવાની ઘટના અત્યંત હૃદયવિદારક છે. જાન ગુમાવનાર નિર્દોષ બાળકોના આત્માની શાંતિ માટે પ્રાર્થના કરું છું.
દુ:ખની આ ઘડીમાં તેમના પરિવારજનો પ્રત્યે આત્મીય સંવેદના વ્યક્ત કરું છું. પરમકૃપાળુ પરમાત્મા તેમને આ દુ:ખ સહન કરવાની શક્તિ આપે.…
— Bhupendra Patel (@Bhupendrapbjp) January 18, 2024