BIG NEWS: ಈಗ ಚರ್ಚಿಸಿ ಪ್ರಯೋಜನವಿಲ್ಲ: ಮಗನ ಸೋಲಿಗೆ ಕೇಂದ್ರ ಸಚಿವ HDK ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯ ಸೋಲನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ಮಗ ನಿಖಿಲ್ ಸೋಲಿನ ಬಗ್ಗೆ ಇದೇ ಮೊದಲ ಬಾರಿ ಪ್ರತಿಕ್ಲ್ರಿಯಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಈಗ ಚರ್ಚಿಸಿ ಪ್ರಯೋಜನವಿಲ್ಲ ಎಂದಿದ್ದಾರೆ.

ಈಗ ಚರ್ಚೆ ಮಾಡಿ ಏನೂ ಪ್ರಯೋಜನವಿಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ರೂ ಆಮೇಲೆ ಮಾತನಾಡುತ್ತೇನೆ ಎಂದಿದ್ದಾರೆ.

ನಾಳೆ ನ.25ರಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಹೆಚ್.ಡಿ.ಕುಮಾರಸ್ವಾಮಿ ಇಂದು ಬೆಂಗಳೂರಿನಿಂದ ದೆಹಲಿಗೆ ಹೊರಟಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read