BIG NEWS: ಸಿಎಂ ಸಿದ್ದರಾಮಯ್ಯ ಆಡೋದೆಲ್ಲ ಅಹಂಕಾರದ ಮಾತುಗಳೇ; HDK ವಾಗ್ದಾಳಿ

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆಡೋದೆಲ್ಲ ಅಹಂಕಾರದ ಮಾತುಗಳೇ ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ವಿಧಾನಸಭಾ ಚುನಾವಣೆಯ ವೇಳೆ ಈ ಹಿಂದೆ ಪೈಲ್ವಾನರ ಹಾಗೇ ಭುಜ ಹಾಗೂ ತೊಡೆ ತಟ್ಟಿದ್ದರಲ್ಲ ಅಂತಹ ಕೆಲಸವನ್ನು ನಾವೆಂದೂ ಮಾಡಿಲ್ಲ. ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಜಾತ್ಯಾತೀತ ಪದ ತೆಗೆದುಹಾಕುವಂತೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದಾರೆ. ಜಾತಿ ರಾಜಕಾರಣ ಮಾಡುತ್ತಿರುವವರೇ ಕಾಂಗ್ರೆಸ್ ನವರು ಅವರಿಂದ ನಾವು ಹೇಳಿಸಿಕೊಳ್ಳಬೇಕಿಲ್ಲ ಎಂದರು.

ಎರಡು ದಿನಗಳ ಕಾಲ ಮೈಸೂರು ಹಾಗೂ ಚಾಮರಾಜನಗರ ಪ್ರವಾಸ ಮಾಡುತ್ತೇನೆ. ಚಾಮರಾಜನಗರದಲ್ಲಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ದೆವೇಗೌಡರು ಜೊತೆ ಇರಲಿದ್ದಾರೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read