BIG NEWS: ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪ್ರಚಾರ ವಿಚಾರ; ಮಾಜಿ ಸಿಎಂ HDK ಹೇಳಿದ್ದೇನು?

ಮೈಸೂರು: ಮಂಡ್ಯ ಮೈತ್ರಿ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಪರ ಸಂಸದೆ ಸುಮಲತಾ ಅಂಬರೀಶ್ ಪ್ರಚಾರದ ಬಗ್ಗೆ ಸ್ವತಃ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಸುಮಲತಾ ಅಂಬರೀಶ್ ಬಿಜೆಪಿ ಸೇರಿದ್ದಾರೆ. ಪಕ್ಷ ಹೇಳಿದ ಕಡೆಗಳಲ್ಲಿ ಪ್ರಚಾರ ಮಡುತ್ತೇನೆ ಎಂದು ಹೇಳಿದ್ದಾರೆ. ಇನ್ನೂ ಮೂರು ದಿನ ಇದೆ. ನೋಡೋಣ ಎಂದು ಹೇಳಿದರು.

ಸುಮಲತಾ ನಮ್ಮಲ್ಲಿ ಕೂಡ ಬಂದು ಪ್ರಚಾರ ಮಾಡಬಹುದು. ಕೇವಲ ಹೇಳಿಕೆಗಳನ್ನು ನೋಡುವುದರಿಂದ ಏನೂ ಆಗುವುದಿಲ್ಲ. ಹೇಳಿಕೆ ಕೊಡದೆಯೂ ಬೆಂಬಲ ನೀಡಬಹುದು ಅಲ್ಲವೇ? ಎಂದು ಕೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read