BREAKING NEWS: ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಖುದ್ದು ಕೋರ್ಟ್ ಗೆ ಹಾಜರಾದ ಶಾಸಕ ಹೆಚ್.ಡಿ.ರೇವಣ್ಣ

ಬೆಂಗಳೂರು: ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದ್ದು, ಜಾಮೀನು ನೀಡಲು ಎಸ್ ಐಟಿ ಆಕ್ಷೇಪ ವ್ಯಕ್ತಪಡಿಸಿದೆ.

ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹೆಚ್.ಡಿ.ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಆರಂಭವಾಗಿದೆ. ಇದೇ ಪ್ರಕರಣದಲ್ಲಿ ರೇವಣ್ಣ ವಿರುದ್ಧ ಸೆಕ್ಷನ್ 376 ಅಡಿ ಎಫ್ ಐ ಆರ್ ದಾಖಲಾಗಿದೆ. ಜಾಮೀನುರಹಿತ ಪ್ರಕರಣ ಕೂಡ ಇದೆ. ಹಾಗಾಗಿ ಜಾಮೀನಿಗೆ ನಮ್ಮ ಆಕ್ಷೇಪಣೆ ಇದೆ ಎಂದು ಎಸ್ ಪಿಪಿ ವಾದ ಮಂಡಿಸಿದ್ದಾರೆ.

ಅಲ್ಲದೇ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರೇವಣ್ಣ ಅವರಿಗೆ 2 ಬಾರಿ ನೋಟಿಸ್ ನೀಡಲಾಗಿದೆ. ಆದಾಗ್ಯೂ ವಿಚಾರಣೆಗೆ ಹಾಜರಾಗಿಲ್ಲ. ಹಾಗಾಗಿ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡುವಂತೆ ಎಸ್ಐಟಿ ಪರ ವಕೀಲೆ ಜಾಯ್ನಾ ಕೊಠಾರಿ ಮನವಿ ಮಾಡಿದ್ದಾರೆ. ಈ ವೇಳೆ ರೇವಣ್ಣ ಖುದ್ದು ಹಾಜರಾಗುವಂತೆ ಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೋರ್ಟ್ ಗೆ ಹಾಜರಾಗಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read