ಬೈಕ್ ಸ್ಕಿಡ್ ಆಗಿ ಅವಘಡ: ಮೂವರು ಹನುಮ ಮಾಲಾಧಾರಿಗಳಿಗೆ ಗಾಯ

ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ಈ ವೇಳೆ ಅವಘಡವೊಂದು ಸಂಭವಿಸಿದೆ.

ಸಂಕೀರ್ತನಾ ಯಾತ್ರೆಗೆ ಆಗಮಿಸುತ್ತಿದ್ದ ಬೈಕ್ ಸ್ಕಿಡ್ ಆಗಿ ಮೂವರು ಹನುಮ ಮಾಲಾಧಾರಿಗಳು ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ನಡೆದಿದೆ.

ಒಂದೇ ಬೈಕ್ ನಲ್ಲಿ ಮೂವರು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಶ್ರೀರಂಗಪಟ್ಟಣದ ತಾಲೂಕು ಆಸ್ಪತ್ರೆಗೆದಾಖಲಿಸಲಾಗಿದೆ.

ಶ್ರೀರಂಗಪಟ್ಟಣದಲ್ಲಿ ಹನುಮ ಮಾಲಾಧಾರಿಗಳಿಂದ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿದ್ದು, ನಿಮಿಷಾಂಬಾ ದೇವಸ್ಥಾನದಿಮ್ದ ಆರಂಭವಾಗಿರುವ ಯತರೆ ಜಾಮೀಯಾ ಮಸೀದಿ ಮುಂಭಗದಿಂದ ರಂಗನಾಥಸ್ವಾಮಿ ದೇವಸ್ಥಾನದವರೆಗೆ ನಡೆಯಲಿದೆ. ಶ್ರೀರಂಗಪಟ್ಟಣ ಸಂಪೂರ್ಣ ಕೇಸರಿ ಮಯವಾಗಿದ್ದು, ಎಲ್ಲೆಲ್ಲೆಲ್ಲೂ ಹನುಮಧ್ವಜ ರಾರಾಜಿಸುತ್ತಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read