BREAKING : ಬೆಂಗಳೂರಲ್ಲಿ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ : ಪ್ರಕರಣ ದಾಖಲು

ಬೆಂಗಳೂರು : ಬೆಂಗಳೂರಲ್ಲಿ ದುಷ್ಕರ್ಮಿಯೋರ್ವ ನಡುರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ನ.6 ರಂದು ಸೌತ್ ಎಂಡ್ ಸರ್ಕಲ್ ನ ಡಿಸಿಪಿ ಕಚೇರಿ ಎದುರು ಈ ಘಟನೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಯುವತಿಯನ್ನು ಬೈಕ್ ನಲ್ಲಿ ಫಾಲೋ ಮಾಡಿಕೊಂಡು ಬಂದ ದುಷ್ಕರ್ಮಿಯೋರ್ವ ಸೌತ್ ಎಂಡ್ ಸರ್ಕಲ್ ಬಳಿ ಯುವತಿಯ ಬಟ್ಟೆ ಎಳೆದು ಕಿರುಕುಳ ನೀಡಿ ನಂತರ   ಯೂ ಟರ್ನ್  ತೆಗೆದುಕೊಂಡು ವಾಪಸ್ ಹೋಗಿದ್ದಾನೆ ಎಂದು ತಿಳಿದು ಬಂದಿದೆ. ರಾತ್ರಿ 10 :30 ರ ವೇಳೆಗೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಯುವತಿ ಜಯನಗರ ಠಾಣೆಯಲ್ಲಿ ತಡವಾಗಿ ಪ್ರಕರಣ ದಾಖಲಿಸಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read