ಪ್ರೀತಿಸುವಂತೆ ಯುವಕನ ಕಿರುಕುಳ: ವಿದ್ಯಾರ್ಥಿನಿ ಆತ್ಮಹತ್ಯೆ

ಚಾಮರಾಜನಗರ: ಯುವಕನೊಬ್ಬ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊಣಕನಪುರ ಗ್ರಾಮದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡವರು. ಗುಂಡ್ಲುಪೇಟೆ ತಾಲೂಕಿನ ಯಡವನಹಳ್ಳಿಯ ಯುವಕ ಶ್ರೀನಿವಾಸ ಕಿರುಕುಳ ನೀಡುತ್ತಿದ್ದ. ಆತನ ಪೋಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದರೂ ತಡೆಯುವ ಪ್ರಯತ್ನ ಮಾಡಿರಲಿಲ್ಲ.

ಕಿರುಕುಳದಿಂದ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕ ಶ್ರೀನಿವಾಸ ಮತ್ತು ಆತನ ತಂದೆ ಬಿಳಿಗಿರಿನಾಯಕ, ತಾಯಿ ನಾಗಮ್ಮ ಅವರ ವಿರುದ್ಧ ವಿದ್ಯಾರ್ಥಿನಿಯ ತಾಯಿ ಬೇಗೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read