ಲೋಕಾಯುಕ್ತ ದಾಳಿ: ಲಂಚ ಸ್ವೀಕರಿಸುತ್ತಿದ್ದ ಕಂದಾಯ ಅಧಿಕಾರಿ ಸೇರಿ ಇಬ್ಬರು ವಶಕ್ಕೆ

ದಾವಣಗೆರೆ: ಲಂಚ ಸ್ವೀಕರಿಸುತ್ತಿದ್ದ ಹರಿಹರ ನಗರಸಭೆಯ ಕಂದಾಯ ಅಧಿಕಾರಿ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ದಾವಣಗೆರೆ ಜಿಲ್ಲೆಯ ಹರಿಹರ ನಗರಸಭೆ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಕಂದಾಯ ಅಧಿಕಾರಿ ರಮೇಶ್, ಪ್ರಥಮ ದರ್ಜೆ ಸಹಾಯಕ ನಾಗೇಶ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

4 ವರ್ಷಗಳಿಂದ ಶ್ರೀದೇವಿ ಪೆಟ್ರೋಲ್ ಬಂಕ್ ಸೈಟ್ ಕಂದಾಯ ಕಟ್ಟಿರಲಿಲ್ಲ. ಕಂದಾಯದ ಮೊತ್ತ ಕಡಿಮೆ ಮಾಡಲು 50 ಸಾವಿರ ರೂಪಾಯಿ ಲಂಚಕ್ಕೆ ಇವರು ಬೇಡಿಕೆ ಇಟ್ಟಿದ್ದರು. ಸೈಟ್ ಮಾಲೀಕ ನಾಗೇಶ್ ನಿಂದ 20 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಎಸ್ಪಿ ಎಂ.ಎಸ್. ಕೌಲಾಪುರೆ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read