BIG NEWS: ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

ದಾವಣಗೆರೆ: ಲೋಕಸಭಾ ಚುನಾವಣೆಯ ವೇಳೆ ಹಣ ದುರುಪಯೋಗ ಪಡಿಸಿಕೊಂಡಿರುವ ಆರೋಪದಲ್ಲಿ ಹರಿಹರ ನಗರಸಭೆ ವ್ಯವಸ್ಥಾಪಕಿಯನ್ನು ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.

ಹೆಚ್.ನಿರಂಜನಿ ಅಮಾನತುಗೊಂಡ ಅಧಿಕಾರಿ. ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಕರ್ತವ್ಯ ಲೋಪ ಆರೋಪದಲ್ಲಿ ನಿರಂಜನಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹೊನ್ನಾಳಿಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿದ್ದ ವೇಳೆ ಹಣ ದುರುಪಯೋಗ ಪಡಿಸಿಕೊಂಡಿದ್ದರು. ಬಳಿಕ ಹರಿಹರ ನಗರಸಭೆ ವ್ಯವಸ್ಥಾಪಕಿಯಾಗಿ ವರ್ಗಾವಣೆಗೊಂಡ ಬಳಿಕವೂ ಕಂದಾಯ ಅಧಿಕರಿಯಾಗಿ ಬಿ ಖಾತಾ ವಿತರಣೆಯಲ್ಲಿ, ದಾಖಲೆಗಳ ಕೊಠಡಿ ನಿರ್ವಹಣೆಯಲ್ಲಿ ಕರ್ತವ್ಯ ಲೋಪವೆಸಗಿದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ನಿರಂಜನಿ ಅವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read