ಬೀಗರ ಊಟ ಮಾಡಿದ 22 ಮಕ್ಕಳು ಸೇರಿ 96 ಮಂದಿ ಅಸ್ವಸ್ಥ

ದಾವಣಗೆರೆ: ಬೀಗರ ಊಟ ಮಾಡಿದ್ದ 96 ಜನರಿಗೆ ವಾಂತಿ ಭೇದಿ ಆಗಿ ಅಸ್ವಸ್ಥರಾದ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸಿಂಗ್ರಿಹಳ್ಳಿಯಲ್ಲಿ ನಡೆದಿದೆ.

ಸಿಂಗ್ರಿಹಳ್ಳಿಯಲ್ಲಿ ನಡೆದ ಬೀಗರ ಊಟದಲ್ಲಿ ಊಟ ಸೇವಿಸಿದ್ದ 22 ಮಕ್ಕಳು ಸೇರಿ 96 ಜನರಿಗೆ ವಾಂತಿ ಭೇದಿಯಾಗಿದೆ. ಅಸ್ವಸ್ಥರನ್ನು ದಾವಣಗೆರೆಯ ಚಿಗಟೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಗೆ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್ ಮತ್ತು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಂಕರ ನಾಯಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಗ್ಯ ವಿಚಾರಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read