ಸಿಎಂ ಸಿದ್ಧರಾಮಯ್ಯ ಎಲ್ಲಾ ಜಿಲ್ಲೆಗಳಿಗೆ ಸರಿ ಸಮನಾಗಿ ಹಣ ಹಂಚಿಕೆ ಮಾಡಿದ್ದಾರಾ…?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ನವದೆಹಲಿ: ಆಂಧ್ರ ಪ್ರದೇಶ, ಬಿಹಾರಕ್ಕೆ ಹೆಚ್ಚು ಅನುದಾನ ನೀಡಿದ ಬಗ್ಗೆ ಕಾಂಗ್ರೆಸ್ ನವರು ಟೀಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಕೇಂದ್ರ ಬಜೆಟ್ ಕುರಿತಾಗಿ ಕಾಂಗ್ರೆಸ್ ನಾಯಕರು ಟೀಕಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್.ಡಿ.ಕೆ., ಪ್ರಧಾನಿ ಭೇಟಿಯಾಗಿ ಯೋಜನೆ ತರಲು ಶ್ರಮಿಸುತ್ತೇವೆ. ಒಂದು ತಿಂಗಳಲ್ಲೇ ಎಲ್ಲವನ್ನು ತಂದು ಇಲ್ಲಿ ಇಳಿಸಲು ಸಾಧ್ಯವಿಲ್ಲ. ರಾಜ್ಯಕ್ಕೆ ಯೋಜನೆ ತರಲು ಶ್ರಮಿಸುತ್ತೇವೆ ಎಂದು ಹೇಳಿದ್ದಾರೆ.

ರಾಜ್ಯಗಳಿಗೆ ಅನುದಾನ ಹಂಚಿಕೆಗೆ ಮಾರ್ಗಸೂಚಿ ಇದೆ. ಸಿದ್ದರಾಮಯ್ಯನವರು ಎಲ್ಲ ಜಿಲ್ಲೆಗಳಿಗೆ ಸರಿಸಮನಾಗಿ ಹಣ ಹಂಚಿಕೆ ಮಾಡಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಕೆಲವು ರಾಜ್ಯಗಳಿಗೆ ವಿಶೇಷ ಪ್ಯಾಕೇಜ್ ಕೊಡುತ್ತಾರೆ. ವಿಶೇಷ ಪ್ಯಾಕೇಜ್ ಕೊಡುವ ಪ್ರಕ್ರಿಯೆ ಹಿಂದಿನಿಂದಲೂ ಬಂದಿದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read