ಕುಮಾರಸ್ವಾಮಿ ಹಾರ್ಟ್ ಆಪರೇಷನ್ ಬಗ್ಗೆ ಶಾಸಕ ರಮೇಶ್ ವ್ಯಂಗ್ಯ

ಮಂಡ್ಯ: ಚುನಾವಣೆ ಬಂದಾಗ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುತ್ತದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ ವ್ಯಂಗ್ಯವಾಡಿದ್ದಾರೆ.

ಮಳವಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಬಂದಾಗಲೆಲ್ಲ ಕುಮಾರಸ್ವಾಮಿಗೆ ಹೃದಯದ ಸಮಸ್ಯೆ ಎದುರಾಗುವುದು, ಆಸ್ಪತ್ರೆಗೆ ದಾಖಲಾಗುವುದು ಮಾಮೂಲಿಯಾಗಿದೆ ಎಂದಿದ್ದಾರೆ.

ಆಸ್ಪತ್ರೆಯಿಂದ ಹೊರಬಂದ ಮೂರೇ ದಿನಕ್ಕೆ ಕುಮಾರಸ್ವಾಮಿ ರಾಜ್ಯ ಸುತ್ತಾಡುತ್ತಿದ್ದಾರೆ. ಅದು ಹೇಗೆ ಎನ್ನುವುದು ಅರ್ಥವಾಗುತ್ತಿಲ್ಲ. ಚುನಾವಣೆ ಇಲ್ಲದ ಸಮಯದಲ್ಲಿ ಸಹಜವಾಗಿಯೇ ಇರುವ ಕುಮಾರಸ್ವಾಮಿ ಚುನಾವಣೆ ಸಮೀಪಿಸುತ್ತಿದ್ದಂತೆ ಹೃದಯದ ಸಮಸ್ಯೆ ಎನ್ನುತ್ತಾರೆ. ಆಸ್ಪತ್ರೆಗೂ ದಾಖಲಾಗುತ್ತಾರೆ. ಎರಡೇ ದಿನಕ್ಕೆ ಮನೆಗೆ ಬಂದು ಮರುದಿನದಿಂದಲೇ ಎಲ್ಲೆಡೆ ಓಡಾಡುತ್ತಾರೆ ಎಂದು ಹೇಳಿದ್ದಾರೆ.

ನಮ್ಮ ಚೆಲುವರಾಯಸ್ವಾಮಿಗೂ ಇದೇ ರೀತಿ ಹೃದಯದ ಸಮಸ್ಯೆ ಇದೆ. ಆದರೆ ಅವರು ಆಸ್ಪತ್ರೆ ಸೇರಿದರೆ ತಿಂಗಳುಗಟ್ಟಲೆ ಹೊರಗೆ ಬರುವುದೇ ಇಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read