BIG NEWS: ನುಡಿದಂತೆ ನಡೆದ ಕೇಂದ್ರ ಸಚಿವ H.D. ಕುಮಾರಸ್ವಾಮಿ: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಜಗನ್ನಾಥ್ ಪುತ್ರಿಗೆ ಉದ್ಯೋಗ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡ್ಡ ಕುಸಿತದಲ್ಲಿ ಕಣ್ಮರೆಯಾಗಿದ್ದ ಜಗನ್ನಾಥ ಅವರ ಪುತ್ರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೆಲಸ ಕೊಡಿಸಿದ್ದಾರೆ.

ಕೃತಿಕಾ ಅವರಿಗೆ ಕೆಲಸ ಕೊಡಿಸಿ ನುಡಿದಂತೆ ನಡೆದುಕೊಂಡಿದ್ದಾರೆ. ಕೈಗಾ ಅಣು ವಿದ್ಯುತ್ ಸ್ಥಾವರದ ಬಿಹೆಚ್ಇಎಲ್ ನಲ್ಲಿ ಕೃತಿಕಾ ಗೆ ಉದ್ಯೋಗ ಕಲ್ಪಿಸಲಾಗಿದೆ. ದೂರವಾಣಿ ಮೂಲಕ ಕುಮಾರಸ್ವಾಮಿ ಉದ್ಯೋಗ ಖಾತರಿಪಡಿಸಿದ್ದಾರೆ.

ಮತ್ತೊರ್ವ ಪುತ್ರಿ ಪಲ್ಲವಿ ನಾಯಕ ಅವರಿಗೂ ಕಳೆದ ವಾರ ಪ್ರವಾಸೋದ್ಯಮ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ನೌಕರಿ ನೀಡಲಾಗಿತ್ತು.

ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಕುಮಾರಸ್ವಾಮಿ ಕೆಲಸ ಕೊಡಿಸುವ ಭರವಸೆ ನೀಡಿದ್ದರು. ಅಂತೆಯೇ ಅವರು ಕೆಲಸ ಕೊಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read