BREAKING: ನಾನಾಗಲೀ, ನನ್ನ ಮಕ್ಕಳಾಗಲೀ ಟಿಕೆಟ್ ಫೈನಲ್ ಮಾಡಲಾಗಲ್ಲ; ಭವಾನಿ ರೇವಣ್ಣ ವಿಚಾರದಲ್ಲಿ ಮೌನ ಮುರಿದ ಹೆಚ್.ಡಿ. ರೇವಣ್ಣ

ಹಾಸನ: ನಾನಾಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ವರಿಷ್ಠರ ತೀರ್ಮಾನವೇ ಅಂತಿಮ ಎಂದು ಪತ್ನಿ ಭವಾನಿ ರೇವಣ್ಣ ವಿಚಾರದಲ್ಲಿ  ಮಾಜಿ ಸಚಿವ ಹೆಚ್.ಡಿ. ರೇವಣ್ಣ ಮೌನ ಮುರಿದಿದ್ದಾರೆ.

ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ. ನಮ್ಮಿಬ್ಬರನ್ನು ಬೇರೆ ಮಾಡುತ್ತೇನೆ ಎಂಬುದು ಕೇವಲ ಭ್ರಮೆ ಅಷ್ಟೇ ಎಂದು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ರೇವಣ್ಣ ಹೇಳಿದ್ದಾರೆ.

ಹಾಸನ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ದೇವೇಗೌಡರು, ಹೆಚ್.ಡಿ. ಕುಮಾರಸ್ವಾಮಿ, ಮತ್ತು ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ನಿರ್ಧಾರವೇ ಅಂತಿಮ. ಹಾಸನ ಜಿಲ್ಲಾ ಜೆಡಿಎಸ್ ಮುಖಂಡರು ಅಂತಿಮವಾಗಿ ನಿರ್ಧರಿಸುತ್ತಾರೆ. ನಾನಗಲಿ, ನನ್ನ ಮಕ್ಕಳಾಗಲಿ ಟಿಕೆಟ್ ಫೈನಲ್ ಮಾಡಲು ಆಗಲ್ಲ. ಕುಮಾರಸ್ವಾಮಿ ಹಾಗೂ ನನ್ನ ಸಂಬಂಧ ಬೇರ್ಪಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read