BIG NEWS : ಇಂದೂ ಬ್ಲಾಸ್ಟ್ ಆಗದ ‘ಪೆನ್ ಡ್ರೈವ್ ಬಾಂಬ್’ : ಅರ್ಜೆಂಟ್ ಏನಿದೆ ಬ್ರದರ್ ಎಂದ ‘HDK’

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವರ್ಗಾವಣೆ ದಂಧೆ ಆರೋಪ ಮಾಡಿದ್ದು, ಇಂದು ವರ್ಗಾವಣೆ ದಂಧೆಗೆ ಸಂಬಂಧಿಸಿದ ದಾಖಲೆ ಇದೆ ಎನ್ನಲಾಗಿರುವ ಪೆನ್ ಡ್ರೈವ್ ಬಿಡುಗಡೆ ಮಾಡಲು ಕುಮಾರಸ್ವಾಮಿ ನಿರ್ಧರಿಸಿದ್ದಾರೆ ಎನ್ನಲಾಗಿತ್ತು. ಆದರೆ ಇಂದು ಕೂಡ ಪೆನ್ ಡ್ರೈವ್ ನಲ್ಲಿರುವ ರಹಸ್ಯ ಬಯಲಾಗಿಲ್ಲ.

ಈ ಕುರಿತು ಸುದ್ದಿಗಾರರ ಜೊತೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ ಅರ್ಜೆಂಟ್ ಏನಿದೆ ಬ್ರದರ್, ಇನ್ನೂ ಟೈಮ್ ಇದೆ. ಸಮಯ ಬಂದಾಗ ಪೆನ್ ಡ್ರೈವ್ ರಹಸ್ಯ ಬಯಲಾಗಲಿದೆ ಎಂದರು.

ರಾಜ್ಯ ಸರ್ಕಾರದ 4 ಇಲಾಖೆಗಳ ವರ್ಗಾವಣೆ ದಂಧೆಯಲ್ಲಿ ಮೂವರು ಪ್ರಭಾವಿಗಳ ಸಂಭಾಷಣೆ ಬಗ್ಗೆ ಮಾಹಿತಿ ಸಂಗ್ರಹ ಮಾಡಿರುವ ಕುಮಾರಸ್ವಾಮಿ. ಪೆನ್ಡ್ರೈವ್ ನಲ್ಲಿ ಪ್ರಮುಖ ಅಧಿಕಾರಿಗಳ ವಿಚಾರದಲ್ಲಿ ಸಂಭಾಷಣೆ ನಡೆಸಿರುವ ಆಡಿಯೋ ಇದೆ ಎನ್ನಲಾಗಿದೆ.ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಪೆನ್ ಡ್ರೈವ್ ನಲ್ಲಿರುವ ಆಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಪೆನ್ ಡ್ರೈವ್ ಬಿಡುಗಡೆಯಾದ್ರೆ ಪ್ರಭಾವಿ ಸಚಿವರೊಬ್ಬರು ರಾಜೀನಾಮ ನೀಡಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಸದ್ಯ ರಾಜ್ಯ ರಾಜಕಾರಣದಲ್ಲಿ ಪೆನ್ ಡ್ರೈವ್ ಬಾಂಬ್ ಬಗ್ಗೆ ತೀವ್ರ ಚರ್ಚೆ ನಡೆದಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read