ಶಿವಮೊಗ್ಗ: ಶಿವಮೊಗ್ಗ ಕೆಎಸ್ಆರ್ಪಿ ಬೆಟಾಲಿಯನ್ ಹೆಡ್ ಕಾನ್ಸ್ಟೇಬಲ್ ಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಭದ್ರಾವತಿ ಹೊಸಮನೆ ನಿವಾಸಿಯಾಗಿರುವ ಚಂದ್ರಶೇಖರ್(44) ಮೃತಪಟ್ಟವರು. ಭದ್ರಾವತಿ ಉಜ್ಜಿನೀಪುರದ ನಗರಸಭೆ ಪಂಪ್ ಹೌಸ್ ಬಳಿಯ ಭದ್ರಾ ನದಿ ಸೇತುವೆ ಕೆಳಭಾಗದಲ್ಲಿ ಶನಿವಾರ ರಾತ್ರಿ ಬಹಿರ್ದೆಸೆಗೆ ಹೋಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭಾನುವಾರ ಚಂದ್ರಶೇಖರ್ ಮೃತದೇಹ ಪತ್ತೆಯಾಗಿದೆ. ಮೃತರಿಗೆ ಪತ್ನಿ, ಪುತ್ರ, ಮೂವರು ಪುತ್ರಿಯರು ಇದ್ದಾರೆ. ಕಾಗದನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.