ಬೆಂಗಳೂರು: ರಾಜ್ಯದಲ್ಲಿ ನಾಲ್ಕೈದು ದಿನಗಳಿಂದ ಬಿಡುವ ನೀಡಿರುವ ಮಳೆ ಆಗಸ್ಟ್ 28 ರಿಂದ ಮತ್ತೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 28 ರಿಂದ 30ರವರೆಗೆ ಭಾರಿ ಮಳೆಯಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಒಳನಾಡಿನ ಬೀದರ್, ಕಲಬುರಗಿಯಲ್ಲಿ ಆಗಸ್ಟ್ 28 ರಿಂದ ಮುಂದಿನ ಎರಡು ದಿನ ಹಾಗೂ ಕೊಡಗು, ಬೆಳಗಾವಿ ಜಿಲ್ಲೆಗಳಲ್ಲಿ ಆಗಸ್ಟ್ 29ರಂದು ಹೆಚ್ಚಿನ ಮಳೆಯಾಗುವ ಸಂಭವ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 28ರಂದು ಯಾದಗಿರಿಯಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.