ಭಾರಿ ಮಳೆ, ಗುಡ್ಡ ಕುಸಿತ ಹಿನ್ನೆಲೆ: ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್: ಬಸ್ ಟಿಕೆಟ್ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆಯಿಂದಾಗಿ ಹಲವೆಡೆ ಗುಡ್ಡ ಕುಸಿತವುಂಟಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೆ 14 ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ ರದ್ದುಗೊಳಿಸಿದೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ರೈಲುಗಳು ರದ್ದಾಗಿದ್ದು, ಊರಿಗೆ ಹೋಗಬೇಕಾದ ಪ್ರಯಾಣಿಕರು ಭಾರಿ ಬೆಲೆ ತೆರಬೇಕಾದ ಸ್ಥಿತಿ ಎದುರಾಗಿದೆ. ರೈಲುಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಖಾಸಗಿ ಬಸ್ ಗಳು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಬಸ್ ಪ್ರಯಾಣ ದರ ಹೆಚ್ಚಿಸಿದ್ದಾರೆ.

ಬೆಂಗಳೂರಿನಿಂದ ಮಂಗಳೂರಿಗೆ ತೆರಳುವ ಖಾಸಗಿ ಬಸ್ ಗಳ ಟಿಕೆಟ್ ದರ ದುಪ್ಪಟ್ಟಾಗಿದೆ. 500 ರೂ, 600 ರೂ ಇದ್ದ ಟಿಕೆಟ್ ದರ ಏಕಾಏಕಿ 1000 ರೂ. ನಿಂದ 1200 ರೂ.ಗೆ ಏರಿಸಲಾಗಿದೆ. ಎಸಿ ಬಸ್ ಗಳ ಟಿಕೆಟ್ ದರವಂತು 2000ರೂ ನಿಂದ 4000 ರೂವರೆಗೂ ಏರಿಕೆಯಾಗಿದೆ. ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ಜನರಿಗೆ ಬಸ್ ಟಿಕೆಟ್ ದರ ಏರಿಕೆ ಶಾಕ್ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read