KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

ಬ್ಯಾಂಕ್ ಖಾತೆ ತೆರೆಯದ `ಪಡಿತರ ಚೀಟಿದಾರ’ರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

Published July 14, 2023 at 12:14 pm
Share
SHARE

ರಾಜ್ಯ ಸರ್ಕಾರದ ಆದೇಶದಂತೆ ಅಂತ್ಯೋದಯ(ನಾಲ್ಕು ಅಥವಾ ನಾಲ್ಕಕ್ಕಿಂತ  ಹೆಚ್ಚು ಸದಸ್ಯರು) ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ 5 ಕೆ.ಜಿ ಆಹಾರಧಾನ್ಯವನ್ನು ಸೇರಿಸಿ ಪ್ರತಿ ತಿಂಗಳು ಪ್ರತಿ ಫಲಾನುಭವಿಗೆ ತಲಾ 10 ಕೆಜಿ ಆಹಾರಧಾನ್ಯ ಉಚಿತವಾಗಿ ವಿತರಿಸಲು ಸರ್ಕಾರ ನಿರ್ಧರಿಸಿದ್ದು,  ಈ ಬಗ್ಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಬಿಡ್ದಾರರು ಆಹಾರಧಾನ್ಯವನ್ನು ಸರಬರಾಜು ಮಾಡುವವರೆಗೆ ಅಂತ್ಯೋದಯ ಅನ್ನ ಯೋಜನೆ ಹಾಗೂ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆ.ಜಿ ಆಹಾರ ಧಾನ್ಯದ ಬದಲಾಗಿ ಪ್ರತಿ ಕೆ.ಜಿಗೆ ರೂ.34/-ರಂತೆ ಪಡಿತರ ಚೀಟಿದಾರರ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿ.ಬಿ.ಟಿ ಮೂಲಕ ಹಣವನ್ನು ವರ್ಗಾಯಿಸಬೇಕಾಗಿರುತ್ತದೆ.

 ಪಡಿತರ ಚೀಟಿಯಲ್ಲಿ ಕಡ್ಡಾಯವಾಗಿ ಕುಟುಂಬದ ಮುಖ್ಯಸ್ಥರು ನಮೂದಾಗಿರಬೇಕು  ಕುಟುಂಬದ ಮುಖ್ಯಸ್ಥರು  ನಿಧನಹೊಂದಿದ್ದಲ್ಲಿ, ಸಂಬಂಧಪಟ್ಟ  ತಾಲೂಕಿನ  ಆಹಾರ  ಶಾಖೆಗೆ  ಭೇಟಿ  ನೀಡಿ,  ಆಹಾರ  ನಿರೀಕ್ಷಕರಿಗೆ ಈ  ಬಗ್ಗೆ  ಮಾಹಿತಿ  ನೀಡಿ,  ಮೃತರ ಹೆಸರನ್ನು  ಪಡಿತರ  ಚೀಟಿಯಿಂದ  ತೆಗೆದು ಹಾಕಿ, ಇ-ಕೆವೈಸಿ  ಮೂಲಕ  ಕುಟುಂಬದ ಮುಖ್ಯಸ್ಥರನ್ನು  ನಮೂದು  ಮಾಡಿಕೊಳ್ಳಬೇಕು. ಒಂದಕ್ಕಿAತ ಹೆಚ್ಚು ಕುಟುಂಬದ ಮುಖ್ಯಸ್ಥರು ನಮೂದಾಗಿದ್ದಲ್ಲಿ ಅಂತಹವರಿಗೆ ನಗದು ವರ್ಗಾವಣೆಗೆ ಅವಕಾಶವಿರುವುದಿಲ್ಲ.

ಬ್ಯಾಂಕ್ ಖಾತೆ ಚಾಲ್ತಿಯಲ್ಲಿಲ್ಲದ, ಬ್ಯಾಂಕ್ ಖಾತೆ ಹೊಂದಿರದ ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗಿರದ ಪಡಿತರ ಚೀಟಿದಾರರ ಮಾಹಿತಿಯನ್ನು ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಚುರಪಡಿಸಿದ್ದು, ಪಡಿತರ ಚೀಟಿದಾರರು ಮಾಹಿತಿಯನ್ನು ಪಡೆದು ಕೂಡಲೇ ಬ್ಯಾಂಕ್ ಖಾತೆಯನ್ನು ತೆರೆಯುವ ಬಗ್ಗೆ/ಚಾಲ್ತಿಗೊಳಿಸುವ ಬಗ್ಗೆ ಕ್ರಮವಹಿಸಬೇಕು. ಇಲ್ಲವಾದಲ್ಲಿ ಅಂತಹ ಪಡಿತರ ಚೀಟಿದಾರರಿಗೆ ಜುಲೈ 2023 ಮಾಹೆಯಲ್ಲಿ ನಗದು ವರ್ಗಾವಣೆ ಆಗುವುದಿಲ್ಲ.

 ಈ ಫಲಾನುಭವಿಗಳು 2023 ರ ಜುಲೈ 20 ರ ಒಳಗೆ ತಮ್ಮ ಬ್ಯಾಂಕ್ ಖಾತೆಗಳನ್ನು ಚಾಲ್ತಿಗೊಳಿಸಿದಲ್ಲಿ ಅಗಸ್ಟ್ ತಿಂಗಳಲ್ಲಿ ನಗದು ವರ್ಗಾವಣೆ ಮೂಲಕ ಈ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ.

ಪಡಿತರ  ಚೀಟಿದಾರರು  ನೇರ  ನಗದು ವರ್ಗಾವಣೆ ಪ್ರಯೋಜನ ಪಡೆಯಲು  ಪ್ರತ್ಯೇಕವಾಗಿ ಅರ್ಜಿ  ಸಲ್ಲಿಸುವ  ಅವಶ್ಯಕತೆ  ಇರುವುದಿಲ್ಲ. ಪಡಿತರ ಚೀಟಿದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ  ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ವತಿಯಿಂದ ಬ್ಯಾಂಕ್ ಖಾತೆ ತೆರೆಯುವ ಸಂಬAಧ  ಕ್ರಮವಹಿಸಲಿದ್ದು, ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್ ಸಿಬ್ಬಂದಿಗಳು ಶಿಬಿರವನ್ನು ನಡೆಸಿ ಸದ್ರಿ ಫಲಾನುಭವಿಗಳಿಗೆ ಆ ಕೂಡಲೇ ಬ್ಯಾಂಕ್ ಅಕೌಂಟ್ ತೆರೆದು ನೀಡುವರು. ಈ ಸಂಬAಧ ಸದ್ರಿ ಪಡಿತರ ಚೀಟಿಯ ಕುಟುಂಬದ ಮುಖ್ಯಸ್ಥರು ಓಟಿಪಿ ಸ್ವೀಕರಿಸಬೇಕಾದ ಮೊಬೈಲ್, ಆಧಾರ್ ಕಾರ್ಡ್ ಪ್ರತಿ, ತರಬೇಕು.

 ಸಾರ್ವಜನಿಕರಿಗೆ ಅನುಕೂಲವಾಗುವಂತೆ ಇಂಡಿಯನ್ ಪೋಸ್ಟಲ್ ಪೇಮೆಂಟ್ ಬ್ಯಾಂಕ್  ವತಿಯಿಂದ ಈ ಕೆಳಕಂಡ ತಾಲೂಕುಗಳಲ್ಲಿ ನಿಗಧಿತ ದಿನಾಂಕಗಳAದು ಶಿಬಿರ ಆಯೋಜಿಸಲಾಗುವುದು.

 ಉಡುಪಿ ತಾಲೂಕಿನಲ್ಲಿ ಜುಲೈ 14 ರಂದು ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಕಚೇರಿ, ಜು. 18 ರಂದು ಉದ್ಯಾವರ ಗ್ರಾಮ ಪಂಚಾಯತ್ ಕಚೇರಿ, ಜು. 19 ರಂದು ಉಡುಪಿ ತಾಲೂಕು ಕಚೇರಿಯ ಆಹಾರ ಶಾಖೆ, ಜು. 20 ರಂದು ಕಲ್ಯಾಣಪುರ ಗ್ರಾಮ ಪಂಚಾಯತ್ ಕಚೇರಿ ಹಾಗೂ ಮಲ್ಪೆ ಅಂಚೆ ಕಚೇರಿಯಲ್ಲಿ ಶಿಬಿರ ಆಯೋಜಿಸಲಾಗುವುದು.

ಕಾಪು ತಾಲೂಕಿಗೆ ಸಂಬAಧಿಸಿದAತೆ ಜು. 15 ರಂದು ಕಾಪು ಅಂಚೆ ಕಚೇರಿ, ಜು. 17 ರಂದು ಕಟಪಾಡಿ ಗ್ರಾಮ ಪಂಚಾಯತ್, ಜು. 20 ರಂದು ಶಿರ್ವ ಅಂಚೆ ಕಚೇರಿ ಹಾಗೂ ಪಡುಬಿದ್ರೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ ಆಯೋಜಿಸಲಾಗುವುದು.

 ಬ್ರಹ್ಮಾವರ ತಾಲೂಕಿನಲ್ಲಿ ಜು. 14 ರಂದು ಮಂದಾರ್ತಿ ಅಂಚೆ ಕಚೇರಿ, ಜು. 17 ರಂದು ಬ್ರಹ್ಮಾವರ ಅಂಚೆ ಕಚೇರಿ ಹಾಗೂ ಜು. 18 ರಂದು ಕೋಟಾ ಅಂಚೆ ಕಚೇರಿಯಲ್ಲಿ ಶಿಬಿರ ನಡೆಯಲಿದೆ.

ಕುಂದಾಪುರ ತಾಲೂಕಿನಲ್ಲಿ ಜು. 15 ರಂದು ಸಿದ್ಧಾಪುರ ಗ್ರಾಮ ಪಂಚಾಯತ್, ಜು. 19 ರಂದು ಹಾಲಾಡಿ ಗ್ರಾಮ ಪಂಚಾಯತ್ ಕಚೇರಿ ಹಾಗೂ ಜು. 20 ರಂದು ವಂಡ್ಸೆ ಅಂಚೆ ಕಚೇರಿಯಲ್ಲಿ ಶಿಬಿರ ನಡೆಯಲಿದೆ.

ಬೈಂದೂರು ತಾಲೂಕಿನಲ್ಲಿ ಜು. 15 ರಂದು ಹಳ್ಳಿಹೊಳೆ ಗ್ರಾಮ ಪಂಚಾಯತ್, ಜು. 17 ರಂದು ಬೈಂದೂರು ತಾಲೂಕು ಕಚೇರಿ ಆಹಾರ ಶಾಖೆ, ಜು. 20 ರಂದು ಕೊಲ್ಲೂರು ಗ್ರಾಮ ಪಂಚಾಯತ್ ಕಚೇರಿ ಹಾಗೂ ಮರವಂತೆ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ ಏರ್ಪಡಿಸಲಾಗುವುದು.

ಕಾರ್ಕಳ ತಾಲೂಕಿನಲ್ಲಿ ಜು. 17 ರಂದು ಕಾರ್ಕಳ ತಾಲೂಕು ಕಚೇರಿ, ನಲ್ಲೂರು ಗ್ರಾಮ ಪಂಚಾಯತ್ ಹಾಗೂ ಬೆಳ್ಮಣ್ ಗ್ರಾಮ ಪಂಚಾಯತ್ ಕಚೇರಿಯಲ್ಲಿ, ಜು. 18 ರಂದು ಅಜೆಕಾರು ನಾಡ ಕಚೇರಿ, ಮಾಳ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಹಾಗೂ ಈದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಶಿಬಿರ ನಡೆಯಲಿದೆ.

ಹೆಬ್ರಿ ತಾಲೂಕಿನಲ್ಲಿ ಜು. 15 ರಂದು ಹೆಬ್ರಿ ತಾಲೂಕು ಕಚೇರಿ, ಬೆಳ್ವೆ ಅಂಚೆ ಕಚೇರಿ ಹಾಗೂ ಮುದ್ರಾಡಿ ಅಂಚೆ ಕಚೇರಿಗಳಲ್ಲಿ ಶಿಬಿರ ಏರ್ಪಡಿಸಲಾಗುವುದು.   ಸಾರ್ವಜನಿಕರು   ಪಡಿತರ  ಹಣ   ವರ್ಗಾವಣೆ  ಬಗ್ಗೆ ವೆಬ್ ಸೈಟ್  ಮೂಲಕ  ನೇರ  ನಗದು  ಪಾವತಿಯಾದ  ಕುರಿತು  ಪರಿಶೀಲಿಸಬಹುದಾಗಿದೆ.   ಹೆಚ್ಚಿನ  ಮಾಹಿತಿಗಾಗಿ  ಸಂಬಂಧಪಟ್ಟ  ತಾಲೂಕು ಆಹಾರ  ಶಾಖೆಯನ್ನು ಸಂಪರ್ಕಿಸುವAತೆ ಹಾಗೂ ಸಾರ್ವಜನಿಕರು ಈ ಯೋಜನೆಯ  ಪ್ರಯೋಜನ  ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

You Might Also Like

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video

BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ

ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ

BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಸಿದ್ಧರಾಮಯ್ಯ ಫೋಟೋ ಬಳಸಿ ಕೋಮು ಪ್ರಚೋದನೆ: ‘ಪೋಸ್ಟ್ ಕಾರ್ಡ್’ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆ ಅರೆಸ್ಟ್

TAGGED:Ration cardರೇಷನ್ ಕಾರ್ಡ್bank accountಬ್ಯಾಂಕ್ ಖಾತೆಅನ್ನಭಾಗ್ಯAnnabhagyaಶಿಬಿರ ಆಯೋಜನೆcamp organized
Share This Article
Facebook Copy Link Print

Latest News

ಟೇಕಾಫ್ ವೇಳೆಯಲ್ಲೇ ಕಳಚಿಬಿದ್ದ ಸ್ಪೈಸ್‌ ಜೆಟ್ ವಿಮಾನದ ಚಕ್ರ | Watch Video
BREAKING: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ ಸ್ವೀಕಾರ
ಇದು ಕೇವಲ ಟ್ರೇಲರ್ ಅಷ್ಟೇ…! ಬಾಲಿವುಡ್ ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ ಹೊಣೆ ಹೊತ್ತ ರೋಹಿತ್ ಗೋದ್ರಾ–ಗೋಲ್ಡಿ ಬ್ರಾರ್ ಗ್ಯಾಂಗ್ ಎಚ್ಚರಿಕೆ
BREAKING: ಹಾಸನದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ಮೇಲೆ ಕ್ಯಾಂಟರ್ ಹರಿದು ನಾಲ್ವರು ಸಾವು: 20 ಮಂದಿಗೆ ಗಾಯ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BIG NEWS: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಹಿಂಪಡೆಯುವಂತೆ ಜಿಲ್ಲಾಧಿಕಾರಿಗೆ ಹಿಂದೂ ಜಾಗರಣ ವೇದಿಕೆ ಮನವಿ
ಆಸ್ಪತ್ರೆಯಲ್ಲಿ ವೈದ್ಯರಿಲ್ಲದ ಕಾರಣ ಹೆರಿಗೆ ಮಾಡಿಸಿದ ನರ್ಸ್: ತೀವ್ರ ರಕ್ತಸ್ರಾವದಿಂದ ಬಾಣಂತಿ, ಮಗು ಸಾವು
ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ ಗುಡ್ ನ್ಯೂಸ್ :   ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
BIG NEWS: ಧರ್ಮಸ್ಥಳ ವಿರುದ್ಧ ಅಪಪ್ರಚಾರ: ತಿಮರೋಡಿ, ಸಮೀರ್, ಸುಜಾತಾ ಭಟ್ ಸೇರಿ ನಾಲ್ವರ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ದಾಖಲು

Automotive

ಎಂಜಿ M9 ಎಲೆಕ್ಟ್ರಿಕ್ MPV: ಹಿಂದಿನ ಸೀಟ್‌ನಲ್ಲೇ ಸಿಗಲಿದೆ ಫುಲ್ ಲಾಂಜ್ ಅನುಭವ!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
‘ವಾಟ್ಸಾಪ್’ ನಲ್ಲಿ ಡಿಲೀಟ್ ಆದ ಮೆಸೇಜ್ ಓದುವುದು ಹೇಗೆ..? ಇಲ್ಲಿದೆ ಟ್ರಿಕ್ಸ್

Entertainment

BREAKING : ‘ಏರ್ ಇಂಡಿಯಾ’ ವಿಮಾನ ದುರಂತದ ಬೆನ್ನಲ್ಲೇ ಸ್ಟಾರ್ ನಿರ್ಮಾಪಕ ನಾಪತ್ತೆ, ವಿಮಾನ ಅಪಘಾತಕ್ಕೆ ಬಲಿಯಾಗಿರುವ ಶಂಕೆ.!
‘ಕಿಚ್ಚ ಸುದೀಪ್’ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್ : ‘ಬಿಲ್ಲ ರಂಗ ಭಾಷಾ’ ಚಿತ್ರದ ಫಸ್ಟ್ ಲುಕ್ ರಿಲೀಸ್.!
ಬಿ. ಸರೋಜಾದೇವಿ ದೇವಿ ನಟಿಸಿದ್ದ ಕೊನೆಯ ಸಿನಿಮಾ ಇದು.! ಆ ಚಿತ್ರದ ನಾಯಕ ನಟ ಕೂಡ ನಮ್ಮ ಜೊತೆ ಇಲ್ಲ.!

Sports

ಏಷ್ಯಾ ಕಪ್ ಜಯಿಸಿ ವಿಶ್ವಕಪ್ ಗೆ ಅರ್ಹತೆ ಪಡೆದ ಭಾರತೀಯ ಪುರುಷರ ಹಾಕಿ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
8 ವರ್ಷಗಳ ನಂತರ ಹಾಕಿ ಏಷ್ಯಾ ಕಪ್ ಗೆದ್ದ ಭಾರತ, 4-1 ಅಂತರದಿಂದ ದಕ್ಷಿಣ ಕೊರಿಯಾ ಸೋಲಿಸಿ ವಿಶ್ವಕಪ್‌ ಗೆ ಅರ್ಹತೆ
ಮಹಿಳಾ ವಿಶ್ವಕಪ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಸಿಂಗರ್ ಶ್ರೇಯಾ ಘೋಷಾಲ್ ಗಾಯನ

Special

ಅತಿಯಾದ ಡ್ರೈ ಫ್ರುಟ್ಸ್ ಸೇವನೆ ತಂದೊಡ್ಡುತ್ತೆ ಈ ಆರೋಗ್ಯ ಸಮಸ್ಯೆ
ಎಷ್ಟು ಬೇಕೋ ಅಷ್ಟೇ ಬಳಸಿ ಶುಂಠಿ; ಅತಿಯಾದರೆ ತಪ್ಪಿದ್ದಲ್ಲ ಅಪಾಯ….!
ಕೋಚಿಂಗ್ ಕ್ಲಾಸಿಗೆ ಹೋಗದೆ ಮನೆಯಲ್ಲೇ ಹೀಗೆ ಕಲೀರಿ ಇಂಗ್ಲೀಷ್

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?