ಪಹಲ್ಗಾಮ್ ದಾಳಿ ಖಂಡಿಸಿ ಏ. 28ರಂದು ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಕೆಗೆ ಹೈಕೋರ್ಟ್ ನಿರ್ಧಾರ

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ಖಂಡಿಸಿ ಏಪ್ರಿಲ್ 28ರಂದು ಎರಡು ನಿಮಿಷ ಮೌನಾಚರಣೆಗೆ ಹೈಕೋರ್ಟ್ ನಿರ್ಧಾರ ಕೈಗೊಂಡಿದೆ.

ಅಂದು ಬೆಳಿಗ್ಗೆ 11 ಗಂಟೆಯಿಂದ 11 ಗಂಟೆ 2 ನಿಮಿಷದವರೆಗೆ ಮೌನಾಚರಣೆ ಮಾಡಲು ಹೈಕೋರ್ಟ್ ನಿರ್ಧಾರ ಕೈಗೊಂಡಿದೆ. ಹೈಕೋರ್ಟ್ ನ ಎಲ್ಲಾ ಪೀಠಗಳ ಅಧಿಕಾರಿ, ಸಿಬ್ಬಂದಿಯಿಂದ ಮೌನಾಚರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಸೂಚನೆಯ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಆದೇಶಿಸಿದ್ದಾರೆ. ಮೌನಾಚರಣೆಯ ಮೂಲಕ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎನ್ನಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read