BREAKING : ಕನ್ನಡಿಗರ ಕ್ಷಮೆ ಕೇಳುವಂತೆ ನಟ ‘ಕಮಲ್ ಹಾಸನ್’ ಗೆ ಹೈಕೋರ್ಟ್ ಸೂಚನೆ : ವಿಚಾರಣೆ ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ

ಬೆಂಗಳೂರು : ಕನ್ನಡಿಗರ ಕ್ಷಮೆ ಕೇಳುವಂತೆ ನಟ ಕಮಲ್ ಹಾಸನ್ ಗೆ ಹೈಕೋರ್ಟ್ ಸೂಚನೆ ನೀಡಿದ್ದು, ವಿಚಾರಣೆ ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿಕೆ ಮಾಡಿದೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು..? ಎಂದು ಪ್ರಶ್ನಿಸಿದ ಹೈಕೋರ್ಟ್ ವಿಚಾರಣೆಯನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದೆ.

ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೋರಿ ಕಮಲ್ ಹಾಸನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ನಲ್ಲಿ ನ್ಯಾ ಎಂ ನಾಗಪ್ರಸನ್ನ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ಕಮಲ್ ಹಾಸನ್ ಅವರನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

ಮೊದಲು ಕೋರ್ಟ್, ನಿಮ್ಮ ಹೇಳಿಕೆಯಿಂದ ನಟ ಶಿವರಾಜ್ ಕುಮಾರ್ ಗೆ ಸಮಸ್ಯೆಯಾಗಿದೆ ಎಂದು ನಟ ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ.ಬೇರೆಯವರ ಭಾವನೆಗೆ ಧಕ್ಕೆ ತಂದು ಸಿನಿಮಾ ರಿಲೀಸ್ ಮಾಡಲು ಹೊರಟಿದ್ದೀರಾ..? ನೀವು ಕ್ಷಮೆಯಾಚಿಸಿದರೆ ಸಮಸ್ಯೆಯೇ ಇರಲ್ಲ ಎಂದು ಹೈಕೋರ್ಟ್ ಕಮಲ್ ಹಾಸನ್ ಪರ ವಕೀಲರಿಗೆ ಹೇಳಿದೆ. ನೀವು ಕ್ಷಮೆಯಾಚಿಸದಿದ್ರೆ ಬಿಡಿ..ಕರ್ನಾಟಕದಲ್ಲಿ ಸಿನಿಮಾ ಯಾಕೆ ರಿಲೀಸ್ ಆಗಬೇಕು,,, ನೀವು ಕ್ಷಮೆಯಾಚಿಸಿದರೆ ಸಮಸ್ಯೆಯೇ ಇರಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ವಿಚಾರದಲ್ಲಿ ನಿಮ್ಮ ನಿಲುವೇನು..? ಎಂದು ಪ್ರಶ್ನಿಸಿದ ಹೈಕೋರ್ಟ್ ವಿಚಾರಣೆಯನ್ನು ಇಂದು ಮಧ್ಯಾಹ್ನ 2:30 ಕ್ಕೆ ಮುಂದೂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read