ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವುದಕ್ಕೆ ಬ್ರೇಕ್: ಹೈಕೋರ್ಟ್ ಆದೇಶ

ಬೆಂಗಳೂರು: ಮೌಖಿಕವಾಗಿ ಪೊಲೀಸ್ ಠಾಣೆಗೆ ರೌಡಿಶೀಟರ್ ಗಳನ್ನು ಕರೆಸುವುದಕ್ಕೆ ಬ್ರೇಕ್ ಹಾಕಲಾಗಿದೆ. ರೌಡಿಶೀಟರ್ ಗಳನ್ನು ಠಾಣೆಗೆ ಕರೆಸಲು ಪ್ರಕ್ರಿಯೆ ನಿಗದಿಪಡಿಸಲಾಗಿದೆ. ನ್ಯಾಯಮೂರ್ತಿ ಆರ್. ನಟರಾಜ್ ಹೈಕೋರ್ಟ್ ಪೀಠದಿಂದ ಆದೇಶ ನೀಡಲಾಗಿದೆ.

ಎಸ್ಎಂಎಸ್, ವಾಟ್ಸಾಪ್ ಮೂಲಕ ಪೊಲೀಸ್ ಠಾಣೆಗೆ ಕರೆಸಬಹುದು. ಠಾಣೆಗಳಿಗೆ ರೌಡಿಶೀಟರ್ ಗಳು ತಮ್ಮ ಮೊಬೈಲ್ ನಂಬರ್ ನೀಡಬೇಕು. ಮೌಖಿಕವಾಗಿ ಕರೆಯುವ ಬದಲು ಎಸ್ಎಂಎಸ್, ವಾಟ್ಸಾಪ್ ಸಂದೇಶ ನೀಡಬೇಕು. ಆಗಲೂ ಠಾಣೆಗೆ ಬರದಿದ್ದರೆ ರೌಡಿಶೀಟರ್ ಮನೆಗೆ ಪೊಲೀಸರು ತೆರಳಬಹುದು. ಸರ್ಕಾರ ಕಾನೂನು ರೂಪಿಸುವವರೆಗೆ ಈ ಪ್ರಕ್ರಿಯೆ ಪಾಲಿಸಲು ಸೂಚನೆ ನೀಡಲಾಗಿದೆ.

ಅಪರಾಧ ಚಟುವಟಿಕೆಯಲ್ಲಿ ಭಾಗಿಯಾದರೆ ಈ ಆದೇಶದ ರಕ್ಷಣೆ ಸಿಗುವುದಿಲ್ಲ. ದಂಡಾಧಿಕಾರಿಯ ಅಧಿಕಾರವನ್ನು ಈ ಆದೇಶ ಕುಂಠಿತಗೊಳಿಸುವುದಿಲ್ಲ ಎಂದು ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಹೈಕೋರ್ಟ್ ಪೀಠ ಆದೇಶ ನೀಡಿದೆ.

ರೌಡಿಶೀಟರ್ ಸುನಿಲ್ ಕುಮಾರ್ ಅಲಿಯಾಸ್ ಸೈಲೆಂಟ್ ಸುನೀಲ ರಿಟ್ ಸಂಬಂಧ ಆದೇಶ ಹೊರಡಿಸಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಹೆಚ್ಚುವರಿ ಆಯುಕ್ತರಾಗಿದ್ದಾಗ ಸುನಿಲ್ ನನ್ನು ಕರೆಸಿ ಎಚ್ಚರಿಕೆ ನೀಡಿದ್ದರು. ಹೀಗಾಗಿ ರೌಡಿಶೀಟರ್ ಸೈಲೆಂಟ್ ಸುನೀಲ ಹೈಕೋರ್ಟ್ ಮೆಟ್ಟಿಲೇರಿದ್ದ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read