BREAKING: ವಂಟಮೂರಿ ಸಂತ್ರಸ್ತೆ ಭೇಟಿಗೆ ಹೈಕೋರ್ಟ್ ನಿರ್ಬಂಧ

 ಬೆಂಗಳೂರು: ಬೆಳಗಾವಿ ಜಿಲ್ಲೆ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕ್ಕೊಳಗಾದ ಸಂತ್ರಸ್ತೆಗೆ ಚಿಕಿತ್ಸೆ ಒದಗಿಸುತ್ತಿರುವ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆಯ ಭೇಟಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ಮುಖ್ಯ ನ್ಯಾಯಮೂರ್ತಿ ಕಚೇರಿಯಲ್ಲಿ ಇಂದು ಪಿಐಎಲ್ ವಿಚಾರಣೆ ನಡೆಸಲಾಗಿದೆ. ಸಾಮಾನ್ಯವಾಗಿ ವ್ಯಕ್ತಿಗಳ ಸ್ವಾತಂತ್ರ್ಯ ನಿರ್ಬಂಧಿಸುವುದಿಲ್ಲ. ನೊಂದಿರುವ ಸಂತ್ರಸ್ತ ಮಹಿಳೆಗೆ ವೈದ್ಯರು ಚಿಕಿತ್ಸೆ ಒದಗಿಸುತ್ತಿದ್ದಾರೆ. ಹೀಗಾಗಿ ಸಂತ್ರಸ್ತೆಯ ಭೇಟಿಗೆ ಷರತ್ತುಬದ್ಧ ನಿರ್ಬಂಧ ವಿಧಿಸುತ್ತಿದ್ದೇವೆ.

ಹೈಕೋರ್ಟ್, ವೈದ್ಯಾಧಿಕಾರಿ ಲಿಖಿತ ಅನುಮತಿ ಇಲ್ಲದೆ ಸಂತ್ರಸ್ತೆಯನ್ನು ಭೇಟಿ ನೀಡುವಂತಿಲ್ಲ. ವ್ಯಕ್ತಿ, ಸಂಘಟನೆ, ರಾಜಕೀಯ ಪಕ್ಷಗಳ ಭೇಟಿಗೆ ನಿರ್ಬಂಧ ವಿಧಿಸಿದೆ. ಆಯೋಗಗಳು, ತನಿಖಾ ಸಂಸ್ಥೆಗಳು ಸಂತ್ರಸ್ತೆ ಭೇಟಿ ಮಾಡಬಹುದು. ಸಂತ್ರಸ್ತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ಹೇಳಿದೆ.

ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಆದೇಶ ನೀಡಿದ್ದು, ಆದೇಶ ಪಾಲಿಸುವುದಾಗಿ ಸರ್ಕಾರದ ಎಎಜಿ ಪ್ರತಿಮಾ ಹೊನ್ನಾಪುರ ಭರವಸೆ ನೀಡಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read