ಹಿಮಾಚಲ ಬಿಕ್ಕಟ್ಟು: ಲೋಕಸಭಾ ಚುನಾವಣೆವರೆಗೂ ಸುಖ್ವಿಂದರ್ ಸುಖು ಅವರೇ ಸಿಎಂ: ಕಾಂಗ್ರೆಸ್

ಶಿಮ್ಲಾ: ರಾಜ್ಯ ವೀಕ್ಷಕರಾಗಿ ನೇಮಕಗೊಂಡ ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ಅವರು ಗುರುವಾರ ತಮ್ಮ ಆರಂಭಿಕ ವರದಿಯನ್ನು ಸಲ್ಲಿಸಿದ್ದು, ಮುಂಬರುವ ಲೋಕಸಭಾ ಚುನಾವಣೆಯವರೆಗೆ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಉಳಿಸಿಕೊಳ್ಳಬೇಕು ಎಂದು ಶಿಫಾರಸು ಮಾಡಿದೆ.

ಭೂಪಿಂದರ್ ಸಿಂಗ್ ಹೂಡಾ ಮತ್ತು ಡಿ.ಕೆ.ಶಿವಕುಮಾರ್ ತಮ್ಮ ಪ್ರಾಥಮಿಕ ವರದಿಯನ್ನು ಕಾಂಗ್ರೆಸ್ ಹೈಕಮಾಂಡ್ ಗೆ ಸಲ್ಲಿಸಿದ್ದಾರೆ.

ವರದಿಗಳ ಪ್ರಕಾರ, ಶಾಸಕರು ಮತ್ತು ಸಚಿವರು ಸುಖು ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ವೀಕ್ಷಕರು ಪಕ್ಷದ ಕೇಂದ್ರ ನಾಯಕತ್ವಕ್ಕೆ ಮಾಹಿತಿ ನೀಡಿದ್ದಾರೆ. ಆದಾಗ್ಯೂ, ಲೋಕಸಭೆಯ ಸಾರ್ವತ್ರಿಕ ಚುನಾವಣೆಯವರೆಗೆ ಮುಖ್ಯಮಂತ್ರಿಯಾಗಿ ಉಳಿಯುವಂತೆ ವೀಕ್ಷಕರು ಸುಖು ಅವರಿಗೆ ಸಲಹೆ ನೀಡಿದ್ದಾರೆ.

ಸುಖು ಅವರನ್ನು ಬದಲಾಯಿಸುವ ಅವಶ್ಯಕತೆಯಿದೆ; ಲೋಕಸಭಾ ಚುನಾವಣೆಗೆ ಮೊದಲು ಅಥವಾ ನಂತರ, ಚುನಾವಣೆಯವರೆಗೆ ಸುಖು ಸಿಎಂ ಆಗಿ ಮುಂದುವರಿಯಬೇಕೇ ಎಂಬುದು ವೀಕ್ಷಕರ ಅಭಿಪ್ರಾಯವಾಗಿದೆ, ಅಂತಿಮ ನಿರ್ಧಾರವನ್ನು ನಾಯಕತ್ವಕ್ಕೆ ಬಿಡಲಾಗಿದೆ ಎಂದು ವೀಕ್ಷಕರು ವರದಿಯಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read