ಕೋರ್ಟ್ ಆದೇಶ ಹಿನ್ನೆಲೆ: ಶಿಕ್ಷಕರ ಬಡ್ತಿ ಹಿಂಪಡೆದ ಶಿಕ್ಷಣ ಇಲಾಖೆ

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015 ರ ಮಾರ್ಚ್ 23ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರೌಢಶಾಲಾ ಹಿಂದಿ ಸಹಶಿಕ್ಷಕರಾಗಿ ಪಡೆದಿದ್ದ ಬಡ್ತಿಯನ್ನು ಹಿಂಪಡೆಯಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಬಡ್ತಿ ಹಿಂಪಡೆಯಲು ಕ್ರಮ ಕೈಗೊಳ್ಳಲಾಗಿದೆ. ಬಡ್ತಿ ಹಿಂಪಡೆದ ಶಿಕ್ಷಕರಿಗೆ ಆಯಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕೌನ್ಸೆಲಿಂಗ್ ಮೂಲಕ ನಿಯಮಾನುಸಾರ ಸ್ಥಳ ನಿಯುಕ್ತಿಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015ರ ಮಾರ್ಚ್ 23ರಿಂದ ಅನ್ವಯವಾಗುವ ಹಿಂದಿ ತತ್ಸಮಾನ ಪದವಿ ಮತ್ತು ಬಿಎಡ್ ತತ್ಸಮಾನ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರೌಢಶಾಲಾ ಹಿಂದಿ ಸಹ ಶಿಕ್ಷಕರಾಗಿ ಬಡ್ತಿ ಪಡೆದುಕೊಂಡಿದ್ದರು. ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಬಡ್ತಿ ಹಿಂಪಡೆಯಲು ತೀರ್ಮಾನ ಕೈಗೊಂಡಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read