ಹಾವೇರಿ ಲೋಕಸಭಾ ಕ್ಷೇತ್ರದಿಂದ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರ : ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಹಾವೇರಿ : ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಪುತ್ರ ಕಾಂತೇಶ್ ಸ್ಪರ್ಧೆ ವಿಚಾರದ ಕುರಿತಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಕಾಂತೇಶ್ ಸ್ಪರ್ಧೆ ಮಾಡುವುದು ಸೂಕ್ತ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಕೆ ಟಿಕೆಟ್ ನೀಡಬೇಕು ಎಂಬುದು ವರಿಷ್ಠರು ನಿರ್ಧರಿಸುತ್ತಾರೆ. ಹಾವೇರಿ ಕ್ಷೇತ್ರದ ಹಾಲಿ ಸಂಸದರು ಸ್ಪರ್ಧೆ ಮಾಡಲ್ಲ ಎಂದಿದ್ದಾರೆ. ಹೀಗಾಗಿ ಇಲ್ಲಿ ಕಾಂತೇಶ್ ಸ್ಪರ್ಧೆ ಮಾಡುವುದು ಸೂಕ್ತ. ಕ್ಷೇತ್ರದ ಎಲ್ಲಾ ನಾಯಕರು ಸ್ಪರ್ಧೆಗೆ ಮನವಿ ಮಾಡಿದ್ದಾರೆ. ಇದರ ಜೊತೆಗೆ ಎಲ್ಲಾ ಮಠಾಧೀಶರ ಆಶೀರ್ವಾದವೂ ಇದೆ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read