ಗೆಲುವು ಕಷ್ಟವೆಂದ ಸಮೀಕ್ಷೆ: ಹಾಲಿ ಶಾಸಕನಿಗೆ ಬಿಗ್ ಶಾಕ್: ಹರಿಹರಕ್ಕೆ ಹೆಚ್.ಎಂ. ರೇವಣ್ಣ…?

ದಾವಣಗೆರೆ: ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಟಿಕೆಟ್ ನೀಡುವಂತೆ ವರಿಷ್ಠರ ಬಳಿ ಮನವಿ ಮಾಡಿದ್ದೇನೆ ಎಂದು ಮಾಜಿ ಸಚಿವ ಹೆಚ್.ಎಂ. ರೇವಣ್ಣ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಹರಿಹರ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ಕುರಿತಾಗಿ ಚರ್ಚೆ ನಡೆದಿದ್ದು, ನಾನು ಕೂಡ ಆಕಾಂಕ್ಷಿತನಾಗಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ. ಕ್ಷೇತ್ರದ ಕಾರ್ಯಕರ್ತರು, ಹಿತೈಷಿಗಳು ಸ್ಪರ್ಧೆಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಹರಿಹರದ ಹಾಲಿ ಶಾಸಕ ಎಸ್. ರಾಮಪ್ಪ ನಮ್ಮದೇ ಸಮುದಾಯದವರು. ಸಮೀಕ್ಷೆಯಲ್ಲಿ ಅವರಿಗೆ ಗೆಲುವು ಕಷ್ಟವೆಂದು ವರದಿ ಬಂದ ಹಿನ್ನೆಲೆಯಲ್ಲಿ ನಾನು ಟಿಕೆಟ್ ಕೇಳುತ್ತಿದ್ದೇನೆ. ರಾಮಪ್ಪ ಅವರನ್ನು ಬಿಟ್ಟು ಬೇರೆಯವರಿಗೆ ಟಿಕೆಟ್ ಕೊಡುವುದಾದರೆ ನನಗೆ ಸ್ಪರ್ಧೆಗೆ ಅವಕಾಶ ನೀಡುವಂತೆ ವರಿಷ್ಠರಿಗೆ ಮನವಿ ಮಾಡಿದ್ದೇನೆ ಎಂದು ರೇವಣ್ಣ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read