BIG UPDATE : ಚಿತ್ರದುರ್ಗದಲ್ಲಿ ಸರ್ಕಾರಿ ಬಸ್- ಲಾರಿ ನಡುವೆ ಭೀಕರ ಅಪಘಾತ : ಮೃತರ ಸಂಖ್ಯೆ 5 ಕ್ಕೇರಿಕೆ

ಚಿತ್ರದುರ್ಗದ ಹಿರಿಯೂರು ಬಳಿ ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತರ ಸಂಖ್ಯೆ 5 ಕ್ಕೇರಿಕೆಯಾಗಿದೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ. ಪರಿಣಾಮ ಬಸ್ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದೆ.

ಬೆಂಗಳೂರು ಮೂಲದ ಪಾರ್ವತಮ್ಮ(45 ರಾಯಚೂರಿನ ಮಾಬಮ್ಮ(35), ರಾಯಚೂರಿನ ಮಸ್ಕಿ ಮೂಲದ ರಮೇಶ್(40),) ಸೇರಿ ಐವರು ನಿಧನರಾಗಿದ್ದಾರೆ. ಘಟನೆ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read