BREAKING : ಬೆಳ್ಳಂ ಬೆಳಗ್ಗೆ ಚಿತ್ರದುರ್ಗದಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ನಾಲ್ವರ ದುರ್ಮರಣ

ಚಿತ್ರದುರ್ಗ : ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ವೇಗವಾಗಿ ಬಂದ ಕಾರು ಹಿಂದುಗಡೆಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಏಳು ಜನರು ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read