BREAKING : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ : ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಹಾಡಹಗಲೇ ಭೀಕರ ಮರ್ಡರ್ ನಡೆದಿದ್ದು, ಹೋಟೆಲ್ ಗೆ ನುಗ್ಗಿ ಕ್ಯಾಶಿಯರ್ ಬರ್ಬರ ಹತ್ಯೆ ಮಾಡಿದ ಘಟನೆ ಜನರನ್ನು ಬೆಚ್ಚಿ ಬೀಳಿಸಿದೆ.

ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯದ ಹೋಟೆಲ್ಗೆ ನುಗ್ಗಿದ ದುಷ್ಕರ್ಮಿ ಕ್ಯಾಶಿಯರ್ ನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ನಡೆದಿದೆ. ಅದೇ ಹೋಟೆಲ್ನಲ್ಲಿ ಹೌಸ್ ಕೀಪರ್ ಆಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಎಂಬಾತ ಹತ್ಯೆ ಮಾಡಿದ್ದಾನೆ ಎನ್ನಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕುಡಿದ ಮತ್ತಿನಲ್ಲಿ ದೊಣ್ಣೆಯಿಂದ ಹೊಡೆದು ಹೌಸ್ ಕೀಪರ್ ಅಭಿಷೇಕ್ ಬರ್ಬರವಾಗಿ ಕೊಲೆ ಮಾಡಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಕಂಪನಿಗೆ ನುಗ್ಗಿದ ದುಷ್ಕರ್ಮಿಗಳು ಕಂಪನಿಯ ಸಿಇಒ ಹಾಗೂ ಎಂಡಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read