BREAKING : ಬೆಂಗಳೂರಿನಲ್ಲಿ ಮತ್ತೊಂದು ಸೂಸೈಡ್ : ಓವರ್ ಟ್ಯಾಂಕ್’ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ.!

ಬೆಂಗಳೂರು : ಓವರ್ ಟ್ಯಾಂಕ್ ಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅರಿಶಿನಕುಂಟೆಯಲ್ಲಿ ನಡೆದಿದೆ.

ಮೃತನನ್ನು ಸುರೇಶ್ (32 ) ಎಂದು ಗುರುತಿಸಲಾಗಿದೆ. ಈತ ಆಂಧ್ರ ಪ್ರದೇಶ ಮೂಲದವನಾಗಿದ್ದು, ಬೆಂಗಳೂರಿನಲ್ಲಿ ತಂಗಿ ಮನೆಯಲ್ಲಿ ನೆಲೆಸಿದ್ದನು.

3 ದಿನದ ಹಿಂದೆ ಬಳ್ಳಾರಿಗೆ ಹೋಗಿ ಬರುವುದಾಗಿ ತೆರಳಿದ್ದ ಈತ ನಾಪತ್ತೆಯಾಗಿದ್ದನು. ಓವರ್ ಟ್ಯಾಂಕ್ ಮೇಲೆ ಈತನ ಚಪ್ಪಲಿ ಪತ್ತೆಯಾಗಿದ್ದು, ಬಳಿಕ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಟೈಲ್ಸ್ ಕೆಲಸ ಮಾಡಿಕೊಂಡು ಸುರೇಶ್ ತಂಗಿ ಮನೆಯಲ್ಲಿ ವಾಸವಿದ್ದನು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read