ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕಬ್ಬಿಣದ ರಾಡ್ ನಿಂದ ಹೊಡೆದು ಹೆತ್ತ ತಾಯಿಯನ್ನೇ ಪಾಪಿ ಮಗ ಕೊಂದಿದ್ದಾನೆ.
ಬಗಲಗುಂಟೆಯ ಮುನೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಹೇಂದ್ರ ಸಿಂಗ್ ಎಂಬಾತ ಕಬ್ಬಿಣದ ರಾಡ್ ನಿಂದ ಹೊಡೆದು ತನ್ನ ತಾಯಿ ಶಾರದಾ ಎಂಬುವವರನ್ನು ಹತ್ಯೆ ಮಾಡಿದ್ದಾನೆ.
ಮಗ ಮಹೇಂದ್ರ ಸಿಂಗ್ ವಿಪರೀತ ಕುಡಿತದ ಚಟಕ್ಕೆ ದಾಸನಾಗಿದ್ದನು. ಮದ್ಯದ ಅಮಲಿನಲ್ಲಿ ಈ ಕೃತ್ಯ ಎಸಗಿ ಆರೋಪಿ ಎಸ್ಕೇಪ್ ಆಗಿರುವುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಬಾಗಲಕುಂಟೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.