BREAKING : ಧಾರವಾಡದಲ್ಲಿ ಘೋರ ದುರಂತ : ಆಟ ಆಡುವಾಗ ಕಾಲು ಜಾರಿ ಕೆರೆಗೆ ಬಿದ್ದು ಇಬ್ಬರು ಮಕ್ಕಳು ಸಾವು.!

ಧಾರವಾಡ : ಧಾರವಾಡದಲ್ಲಿ ಘೋರ ಘಟನೆ ಸಂಭವಿಸಿದ್ದು, ಆಟ ಆಡುವಾಗ ಕೆರೆಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿ ನಾರಾಯಣಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ.

ಮೃತ ಮಕ್ಕಳನ್ನು ಮುದಸ್ಸೀರ್ ಮತ್ತು ಮುಜಮ್ಮಿಲ್ ಎಂದು ಗುರುತಿಸಲಾಗಿದೆ. ಮನೆ ಸಮೀಪದ ಕೆರೆ ಬಳಿ ಆಟವಾಡುವಾಗ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಕುಂದಗೋಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read