BREAKING : ಬೆಂಗಳೂರಿನಲ್ಲಿ ಘೋರ ದುರಂತ :   ‘ಕಾರ್ಖಾನೆಯ ಲಿಫ್ಟ್’ ಗೆ ಸಿಲುಕಿ ಕಾರ್ಮಿಕ ದುರ್ಮರಣ.!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಕಾರ್ಖಾನೆಯ ಲಿಫ್ಟ್ ಗೆ ಸಿಲುಕಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೇಕ್ ತಯಾರಿಸುವ ಕಾರ್ಖಾನೆಯಲ್ಲಿ ಸಾಮಗ್ರಿ ಸಾಗಿಸುವಾಗ ಈ ಘಟನೆ ನಡೆದಿದೆ. ಮೃತರನ್ನು ಬೆಟ್ಟಹಲಸೂರು ನಿವಾಸಿ ಭೂಪೇಂದ್ರ ಚೌಧರಿ (19) ಎಂದು ಗುರುತಿಸಲಾಗಿದೆ.

ಕೇಕ್ ಫ್ಯಾಕ್ಟರಿ ಕಟ್ಟಡದ ಕೆಳ ಮಹಡಿಯಿಂದ 2 ನೇ ಮಹಡಿಗೆ ಬಿಸ್ಕತ್ ತೆಗೆದುಕೊಂಡು ಲಿಫ್ಟ್ ನಲ್ಲಿ ಹೋಗುತ್ತಿದ್ದನು. ಆತ ಕೆಳಗೆ ಬಾಗಿದ್ದರಿಂದ 2 ನೇ ಮಹಡಿಯಲ್ಲಿರುವ ಗೋಡೆ ಆತನ ತಲೆಗೆ ತಗುಲಿದ್ದು, ಗಂಭೀರ ಗಾಯಗೊಂಡ ಯುವಕ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.ಈ ಸಂಬಂಧ ಮೃತನ ಸಂಬಂಧಿ ದೂರು ನೀಡಿದ್ದು, ಅದರನ್ವಯ ಲಕ್ಷ್ಮೀ ಬಿ.ಕೆ ಆಂಡ್ ಫ್ಯಾಕ್ಟರಿಯ ಮೇಲ್ವಿಚಾರಕ ರಾಜಶೇಖರ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read