ಬಿರಿಯಾನಿ ಹೋಟೆಲ್ ಗಳ ಮೇಲೆ IT ಅಧಿಕಾರಿಗಳ ದಿಢೀರ್ ದಾಳಿ

ಬೆಂಗಳೂರು: ಬಿರಿಯಾನಿ ಹೋಟೆಲ್ ಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಹೊಸಕೋಟೆ ಬಳಿಯ ಹಲವು ಬಿರಿಯಾನಿ ಹೋಟೆಲ್ ಗಳ ಮೇಲೆ 50ಕ್ಕೂ ಹೆಚ್ಚು ಐಟಿ ಅಧಿಕಾರಿಗಳ ತಂಡ ಏಕಕಾಲದಲ್ಲಿ ದಾಳಿ ನಡೆಸಿದೆ. ಹೋಟೆಲ್ ಮಾಲಿಕರ ವಿರುದ್ಧ ಜಿಎಸ್ ಟಿ ವಂಚನೆ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಹೋಟೆಲ್ ಗಳಲ್ಲಿ ಯುಪಿಐ ಪಾವತಿ ಖಾತೆಗಳನ್ನು ಬದಲಾಯಿಸಿ ವಹಿವಾಟು ನಡೆದಿರುವ ಆರೋಪ ಕೇಳಿಬಂದಿದೆ. ಅಲ್ಲದೇ ವಹಿವಾಟಿನ ಲೆಕ್ಕಪತ್ರ ಅಸಮರ್ಪಕ ನಿರ್ವಹಣೆ ಬಗ್ಗೆಯೂ ಕೇಳಿಬಂದಿದೆ. ವಿವಿಧ ಹೋಟೆಲ್ ಗಳು, ಹೋಟೆಲ್ ಮಾಲಿಕರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. ದಾಳಿ ವೇಳೆ 1.47 ಕೋಟಿ ನಗದು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read