ಜಾರ್ಖಂಡ್ನ ಸೆರೈಕೆಲಾ-ಖಾರ್ಸ್ವಾನ್ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಮೃತಪಟ್ಟಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಆದಿತ್ಯಪುರ ಪೊಲೀಸ್ ಠಾಣೆ ಪ್ರದೇಶದ ಗಮ್ಹರಿಯಾದ ಚಿತ್ರಗುಪ್ತ ನಗರದಲ್ಲಿ ಕೃಷ್ಣ ಕುಮಾರ್ (40), ಅವರ ಪತ್ನಿ ಡೋಲಿ ದೇವಿ (35) ಮತ್ತು ಅವರ ಅಪ್ರಾಪ್ತ ಹೆಣ್ಣುಮಕ್ಕಳ ಶವಗಳು ಅವರ ಮನೆಯ ಛಾವಣಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಕುಮಾರ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾದ ನಂತರ ಅವರು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರ್ ಗಮ್ಹರಿಯಾದ ಉಕ್ಕಿನ ಸ್ಥಾವರದಲ್ಲಿ ಹಿರಿಯ ವ್ಯವಸ್ಥಾಪಕರಾಗಿದ್ದರು, ತನಿಖೆ ಆರಂಭಿಸಲಾಗಿದೆ ಮತ್ತು ಎಲ್ಲಾ ಕೋನಗಳಲ್ಲಿಅ ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
You Might Also Like
TAGGED:ನಾಲ್ವರು ಆತ್ಮಹತ್ಯೆ.!