BREAKING : ‘ರಾಮಮಂದಿರ’ ಉದ್ಘಾಟನೆ ಬಳಿಕ ನಾನು ಅಯೋಧ್ಯೆಗೆ ಹೋಗುತ್ತೇನೆ : CM ಸಿದ್ದರಾಮಯ್ಯ

ಶಿವಮೊಗ್ಗ : ನಾನೂ ಆಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

ಶಿವಮೊಗ್ಗದ ಯುವನಿಧಿ ಯೋಜನೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ‘ನಾನೂ ಆಯೋಧ್ಯೆಗೆ ಭೇಟಿ ನೀಡುತ್ತೇನೆ, ರಾಮಮಂದಿರ ಉದ್ಘಾಟನೆ ಆದ ಬಳಿಕ ರಾಮಮಂದಿರಕ್ಕೆ ಭೇಟಿ ನೀಡುತ್ತೇನೆ,  ರಾಮಮಂದಿರವನ್ನು ಹೇಗೆ ಮಾಡಿದ್ದಾರೆ ಎಂದು ಎಲ್ಲವನ್ನೂ ನೋಡಿಕೊಂಡು ಬರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಾವು ಕೂಡ ಶ್ರೀರಾಮ ಭಕ್ತರು, ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತಿವೆ ಹೊರತು ಶ್ರೀ ರಾಮನನ್ನು ವಿರೋಧಿಸಿಲ್ಲ. ಆದರೆ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದೆ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡೋದಕ್ಕೆ ಹೊರಟಿದ್ದಾರೆ. ನಾನು ಕೂಡ ಶ್ರೀರಾಮನ ಭಕ್ತ ಆದ್ದರಿಂದ ನಾನೂ ಆಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದು ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read