ಬೆಂಗಳೂರು : ಜೂನ್ 23 ರಂದು ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ”ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿರುವುದು ನಿಜ. ನೋಟಿಸ್ ಕೊಟ್ಟಿದ್ದಾರೆ ವಿಚಾರಣೆಗೆ ಹಾಜರಾಗುತ್ತೀನಿ. ಇಡಿಯವರು ಏನೇನ್ ಕೇಳ್ತಾರೆ, ಉತ್ತರ ಕೊಡುತ್ತೀನಿ” ಎಂದು ಹೇಳಿದರು.
”ಆರೋಪಿ ಐಶ್ವರ್ಯಾಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಎರಡು ಕಾರ್ಯಕ್ರಮಕ್ಕೆ ಕರೆದಿದ್ದ ಹಿನ್ನೆಲೆ ನಾನು ಭಾಗಿಯಾಗಿದ್ದೆ. ಇಡಿಯವರು ಏನೇನ್ ಕೇಳ್ತಾರೆ ಎಂಬ ಮಾಹಿತಿ ಇಲ್ಲ. ಇಡಿ ಅಧಿಕಾರಿಗಳ ಸಂಪೂರ್ಣ ತನಿಖೆಗೆ ನಾನು ಸಹಕಾರ ನೀಡುತ್ತೇನೆ” ಎಂದರು.
ಐಶ್ವರ್ಯಾಗೌಡ ವಿರುದ್ಧ ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿಕೆ ಸುರೇಶ್ ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಜೂನ್ 19 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದು, ಜೂನ್ 23 ರಂದು ವಿಚಾರಣೆಗೆ ಬರುವುದಾಗಿ ಡಿಕೆ ಸುರೇಶ್ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.