‘ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ’: ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಸಚಿವ ಸ್ಥಾನ ಬಿಟ್ಟುಕೊಟ್ಟರೂ ಕೂಡ ಶಾಸಕನಾಗಿಯೇ ಇರುತ್ತೇನೆ. ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡಿದರೆ ನೋಡೋಣ. ಯುವಕರಿಗೆ ಅವಕಾಶ ಸಿಗಲಿ ಎಂಬುದು ನನ್ನ ಅಭಿಪ್ರಾಯ ಎಂದರು.

ಸದ್ಯ, ಆಹಾರ ಇಲಾಖೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅನ್ನಭಾಗ್ಯ ಯೋಜನೆಗಾಗಿ ಬಜೆಟ್ ನಲ್ಲಿ ಎಷ್ಟು ಬೇಕೋ ಅಷ್ಟು ಹಣ ಮೀಸಲಿಡಲಾಗಿದೆ. ಆದ್ದರಿಂದ ಯಾವುದೇ ತೊಂದರೆ ಇಲ್ಲ. ಹೊರ ರಾಜ್ಯಗಳಿಂದ ಅಕ್ಕಿ ತರಿಸುವ ಪ್ರಯತ್ನ ನಡೆಯುತ್ತಿದೆ, ಅಲ್ಲಿವರೆಗೆ ಹೆಚ್ಚುವರಿ ಅಕ್ಕಿ ಬದಲು ಹಣ ನೀಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read