ತುಮಕೂರು : ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇಹಳ್ಳಿ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ‘ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ನಾನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ ಮತಗಳ ಅಂತರದಿಂದ ಗೆದ್ದಿದ್ದೇನೆ.ಈಗ ಚುನಾವಣೆ ನಡೆದರೂ ಅತ್ಯಧಿಕ ಮತಗಳಿಂದ ಗೆಲ್ಲುತ್ತೇನೆ’ ಎಂದರು.
‘ನಾನು ಭ್ರಷ್ಟಾಚಾರ ಮಾಡಿಲ್ಲ, ಆದರೂ ರಾಜೀನಾಮೆ ಕೊಟ್ಟೆ’, ನಾನು ಯಾಕೆ ಬಿಜೆಪಿಗೆ ಹೋಗಬೇಕು..?
ಬಿಜೆಪಿ, ಜೆಡಿಎಸ್, ಕಾಂಗ್ರೆಸ್, ಪಕ್ಷೇತರ ಯಾವ ಪಕ್ಷದಿಂದ ನಿಂತರೂ ಮತ ಹಾಕಿ ನನ್ನನ್ನು ಜನ ಗೆಲ್ಲಿಸುತ್ತಾರೆ. ಸಿದ್ದರಾಮಯ್ಯ ನೇತೃತ್ವ ಇರುವವರೆಗೂ ನನ್ನ ಭವಿಷ್ಯಕ್ಕೆ ತೊಂದರೆ ಇಲ್ಲ’ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
You Might Also Like
TAGGED:ಕೆ.ಎನ್ ರಾಜಣ್ಣ